Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಮನೆಯಂಗಳ ತಲುಪಿದ ಕೇರಳ ಬಾಲಕಿಯ ಸೀಬೆ ಗಿಡ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (14:01 IST)
ಕೊಲ್ಲಂ: ಪ್ರಧಾನಿ ನರೇಂದ್ರ ಮೋದಿ ನಿವಾಸದ ಅಂಗಳದ ಉದ್ಯಾನವನದಲ್ಲಿ ಇನ್ನುಮುಂದೆ ಕೇರಳ ಬಾಲಕಿಯ ಸೀಬೆ ಗಿಡ ಹೂ ಬಿಡಲಿದೆ. ಸಾವಯವ ಕೃಷಿಯ ಕನಸನ್ನು ಹೊತ್ತಿರುವ ಜಯಲಕ್ಷ್ಮಿ ಎನ್ನುವ 10ನೇ ತರಗತಿಯ ಬಾಲಕಿಗೆ ಸೇರಿದ ಗಿಡ ಅದು. ಆಕೆ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಪಂಡಲಂ ಊರಿನ ನಿವಾಸಿ.

ಬಾಲಕಿ ಜಯಲಕ್ಷ್ಮಿ ಬೆಳೆಸಿದ ಗಿಡವನ್ನು ಮಲಯಾಲಂ ಚಿತ್ರನಟ, ರಾಜಕಾರಣಿ ಸುರೇಶ್ ಗೋಪಿ ಉಡುಗೊರೆಯಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ್ದಾರೆ. ಜಯಲಕ್ಷ್ಮಿ ಆ ಗಿಡವನ್ನು ಸುರೇಶ್ ಗೋಪಿಯವರಿಗೆ ಉಡುಗೊರೆಯಾಗಿ ನೀಡಿದ್ದಳು.
ಜಯಲಕ್ಷ್ಮಿ ತನ್ನ ಮನೆಯ ಅಂಗಳದಲ್ಲಿ ಸಾವಯವ ಉದ್ಯಾನವನ ನಿರ್ಮಿಸಿದ್ದಾಳೆ. ಅದೇ ಕಾರಣಕ್ಕೆ ರಾಜ್ಯ ಸರ್ಕಾರದಿಂದ ಪ್ರಶಸ್ತಿಯನ್ನೂ ಪಡೆದಿದ್ದಾಳೆ.
ಈ ಹಿಂದೆ ಜಯಲಕ್ಷ್ಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು ಎನ್ನುವುದು ವಿಶೇಷ. ಪತ್ರದಲ್ಲಿ ಸಾವಯವ ಕೃಷಿಯತ್ತ ಹೊರಳಲು ಯುವಜನತೆಗೆ ಸ್ಫೂರ್ತಿ ಮತ್ತು ಪ್ರೋತ್ಸಾಹ ನೀಡಬೇಕೆಂದು ಆಕೆ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಳು.
ತನ್ನ ಗಿಡ ಪ್ರಧಾನಿ ಮೋದಿಯವರನ್ನು ತಲುಪುತ್ತದೆ ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ ಎಂದು ಜಯಲಕ್ಷ್ಮಿ ಪ್ರತಿಕ್ರಿಯಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments