Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿಗೆ ಇತಿಹಾಸ ಜ್ಞಾನದ ಕೊರತೆ

Webdunia
ಮಂಗಳವಾರ, 7 ನವೆಂಬರ್ 2023 (11:04 IST)
ಪ್ರಧಾನಿ ಮೋದಿ ದೇಶದಲ್ಲಿ ಇತಿಹಾಸ ನಿರ್ಮಿಸುತ್ತಿದ್ದೇನೆ ಎಂದು ಭಾವಿಸಿದ್ದಾರೆ. ಆದರೆ, ಸತ್ಯಕ್ಕೆ, ಇತಿಹಾಸಕ್ಕೆ ದೂರವಾದಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಾ ಹೊಸ ಇತಿಹಾಸವನ್ನೇ ನಿರ್ಮಿಸುತ್ತಿದ್ದಾರೆ ಎಂದು  ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿಗೆ ಇತಿಹಾಸ ಜ್ಞಾನದ ಕೊರತೆಯಿರುವುದರಿಂದ ಹಿರಿಯರಿಂದ ಇತಿಹಾಸದ ಪಾಠ ಕಲಿಯಲಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
 
ಗುಜರಾತ್‌ನ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರನ್ನು ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿಯವರೊಂದಿಗೆ ಹೋಲಿಸಿ, ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯತೆಯಿಂದಾಗಿ ಅವರು ವಿದೇಶದಲ್ಲಿ ಸಾವನ್ನಪ್ಪಿದ್ದರು ಎಂದು ತಪ್ಪು ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಿತ್ತು.
 
ಜವಾಹರಲಾಲ್ ನೆಹರು ರಾಜಕೀಯಕ್ಕೆ ಬರುವ ಮುನ್ನ ಪೇಂಟ್ ಹಚ್ಚುವ ಕೆಲಸ ಮಾಡುತ್ತಿದ್ದರು ಎಂದು ಹೇಳಿಕೆ ನೀಡಿ ಜವಾಹರಲಾಲ್ ನೆಹರು ಮತ್ತು ಅರುಣ್ ನೆಹರು ಯಾರು ಎಂದು ಮೋದಿ ಕೇಳಿದಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ಟೀಕೆಗಳಿಂದ ಕಂಗಾಲಾದ ಬಿಜೆಪಿ ಅಕಸ್ಮಿಕವಾಗಿ ಇಂತಹ ತಪ್ಪಾಗಿದೆ. ಇಂತಹ ತಪ್ಪುಗಳು ಎಲ್ಲರಿಂದ ಆಗುತ್ತವೆ. ಇಂತಹ ವಿಷಯವನ್ನು ಬೃಹದಾಕಾರವಾಗಿ ರೂಪಿಸುತ್ತಿರುವುದು ಮೂರ್ಖತನದ ಪರಮಾವದಿ ಎಂದು ಬಿಜೆಪಿ ವಕ್ತಾರ ಹೇಳಿದ್ದಾರೆ.
 
ಮತ್ತೊಂದು ಕಡೆ ಮೋದಿ ಮಾತನಾಡಿ, ಚೀನಾ ಸರಕಾರ ತನ್ನ ಜಿಡಿಪಿ ಉತ್ಪನ್ನದಲ್ಲಿ ಶೇ.20 ರಷ್ಟನ್ನು ಶಿಕ್ಷಣಕ್ಕಾಗಿ ವೆಚ್ಚ ಮಾಡುತ್ತಿದೆ ಎಂದು ಹೇಳಿದ್ದರು. ಆದರೆ, ಇದೀಗ ಚೀನಾ ಶಿಕ್ಷಣಕ್ಕಾಗಿ ಮಾಡುತ್ತಿರುವ ವೆಚ್ಚ ಕೇವಲ ಶೇ.3 ರಷ್ಟಾಗಿದೆ ಎಂದು  ಹೇಳಿ ನಗೆಪಾಟೀಲಿಗಿಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments