Webdunia - Bharat's app for daily news and videos

Install App

ಸಾಲ ಮನ್ನಾ ಘೋಷಣೆ ಮಾಡಿ ತಾತ್ಕಾಲಿಕವಾಗಿ ರೈತರನ್ನು ಖುಷಿ ಪಡಿಸಲಾರೆ-ಪ್ರಧಾನಿ ಮೋದಿ

Webdunia
ಸೋಮವಾರ, 25 ಫೆಬ್ರವರಿ 2019 (09:29 IST)
ಗೋರಖ್ ಪುರ : ರೈತರ ಸಾಲಮನ್ನಾ ಮಾಡಿಲ್ಲ ಎಂದು ಕೇಂದ್ರ ಸರ್ಕಾರವನ್ನು ದೂಷಿಸುತ್ತಿರುವ ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಕ ಉತ್ತರ ನೀಡಿದ್ದಾರೆ.


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು,’ ಸಾಲಮನ್ನಾ ಎಲ್ಲ ರೈತರ ಹಿತ ಕಾಯಲಾರದು. ಸಾಲ ಮನ್ನಾ ಘೋಷಣೆ ಮಾಡಿ ತಾತ್ಕಾಲಿಕವಾಗಿ ರೈತರನ್ನು ಖುಷಿ ಪಡಿಸುವುದು ತುಂಬ ಸುಲಭದ ಸಂಗತಿ. ಚುನಾವಣೆ ಲಾಭಕ್ಕಾಗಿ ಅಂತಹ 'ಸಿಹಿ ತಿಂಡಿ' ಹಂಚಿ ವಂಚಿಸುವುದು ನಮಗೆ ಕಷ್ಟವಾಗಲಾರದು. ಅಂತಹ ಅಪರಾಧ ಮಾಡಲು ನಮ್ಮ ಮನಸ್ಸು ಒಪ್ಪುವುದಿಲ್ಲ’ ಎಂದು ಹೇಳಿದ್ದಾರೆ.


‘ಸೋಮಾರಿತನ ಹಾಗೂ ನೀಡಿದ ಭರವಸೆ ಈಡೇರಿಸದೇ ವಂಚಿಸುವ ವಿಷಯದಲ್ಲಿ ಕಾಂಗ್ರೆಸ್‌ ಮತ್ತು ಮಹಾಕಲಬೆರಕೆ ಕೂಟ (ಎಸ್ಪಿ-ಬಿಎಸ್ಪಿ) ಒಂದೇ ನಾಣ್ಯದ ಎರಡು ಮುಖಗಳು. ಈ ಹಿಂದೆ ಸತತ ಹತ್ತು ವರ್ಷ ಅಧಿಕಾರದಲ್ಲಿದ್ದ ಈ ಜನ ರೈತರನ್ನು ನೆನಪಿಸಿಕೊಂಡದ್ದು ಚುನಾವಣೆ ಸಂದರ್ಭದಲ್ಲಿ ಒಮ್ಮೆ ಮಾತ್ರ. ಕೃಷಿ ಸಾಲಮನ್ನಾ ಕೆಲವರಿಗೆ ಮಾತ್ರ ದಕ್ಕಿತು. ಅಂದು ಅವರು ನಿಮ್ಮನ್ನು ಮೂರ್ಖರನ್ನಾಗಿಸಿ ವೋಟು ಪಡೆದು ಹೋಗಿದ್ದರು’ ಎಂದು ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments