Webdunia - Bharat's app for daily news and videos

Install App

ಖಾಸಗಿ ಚಾನೆಲ್ಲೊಂದು ಆಪ್ ಗೆಲುವಿಗೆ ಪರೋಕ್ಷ ಸಹಕಾರ ನೀಡುತ್ತಿದೆ: ಶಾ

Webdunia
ಶನಿವಾರ, 24 ಜನವರಿ 2015 (14:27 IST)
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲು ಖಾಸಗಿ ಹಿಂದಿ ಚಾನಲ್ಲೊಂದು ಆಮ್ ಆದ್ಮಿ ಪಕ್ಷಕ್ಕೆ ಸಹಕಾರ ನೀಡುತ್ತಿರುವುದರಿಂದ ಮತದಾರರು ಎಚ್ಚರಿಕೆಯಿಂದಿರಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
 
ಖಾಸಗಿ ಚಾನೆಲ್ಲೊಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಇತರ ಮುಖಂಡರ ಗೆಲುವಿಗೆ ಸಹಕಾರ ನೀಡುತ್ತಿದೆ. ಮಾಧ್ಯಮಗಳ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದಕ್ಕೆ ಇದಕ್ಕಿಂತ ಮತ್ತೊಂದು ಉದಾಹರಣೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
 
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿಯವರನ್ನು ಯಾಕೆ ಆಯ್ಕೆ ಮಾಡಲಾಯಿತು ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಖಾಸಗಿ ಚಾನೆಲ್‌ಗಳು ಕೇಜ್ರಿವಾಲ್ ಕೈಗೊಂಬೆಯಾಗಿವೆ ಎಂದು ತಿರುಗೇಟು ನೀಡಿದ್ದಾರೆ. 
 
ಕಿರಣ್ ಬೇಡಿಯವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ಸಮರ್ಥಿಸಿಕೊಂಡ ಅವರು, ವಿಭಿನ್ನ ಕ್ಷೇತ್ರಗಳಲ್ಲಿ ಉತತ್ಮ ಸಾಧನೆಗೈದವರನ್ನು ಪಕ್ಷಕ್ಕೆ ಬರಮಾಡಿಕೊಲ್ಳುವುದು ಪಕ್ಷದ ಸಿದ್ಧಾಂತವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments