Select Your Language

Notifications

webdunia
webdunia
webdunia
webdunia

ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ,ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ-ಕಾಂಗ್ರೆಸ್ ಶಾಸಕನ ಆರೋಪ

ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ,ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ-ಕಾಂಗ್ರೆಸ್ ಶಾಸಕನ ಆರೋಪ
ನವದೆಹಲಿ , ಶುಕ್ರವಾರ, 17 ಮೇ 2019 (10:32 IST)
ನವದೆಹಲಿ : ಇತ್ತೀಚೆಗೆ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಸಕರೊಬ್ಬರು ಪ್ರಿಯಾಂಕಾ ಗಾಂಧಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.




ಹರ್ಚಂದ್ ಪುರ ಕಾಂಗ್ರೆಸ್ ಶಾಸಕ ರಾಕೇಶ್ ಸಿಂಗ್ ಅವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ. ಅಲ್ಲದೆ ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.


ಅಲ್ಲದೇ ಶಾಸಕ ರಾಕೇಶ್ ಸಿಂಗ್ ಸಹೋದರ ದಿನೇಶ್ ಪ್ರತಾಪ್ ಸಿಂಗ್ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವರು ಬೇರೆ ಕಡೆಯಿಂದ ಗೂಂಡಾಗಳನ್ನು ಕರೆತಂದು ನನ್ನ ಸಹೋದರನ ಮೇಲೆ ಹಲ್ಲೆ ನಡೆಸಿದ್ದು, ಇದು ಪ್ರಿಯಾಂಕಾ ಗಾಂಧಿ ಅವರದ್ದೇ ಷಡ್ಯಂತ್ರ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಕುಂದಗೋಳ ಕ್ಷೇತ್ರದ ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿ ಮಾಡಿದೆ ಈ ಪ್ಲಾನ್