Webdunia - Bharat's app for daily news and videos

Install App

ತಂದೆಯ ಸಾವಿನ ನಂತರ ಬಾತ್ ರೂಂ ತೊಳೆಯುವ ಕೆಲಸ ಮಾಡಿದ್ದೆ: ಪ್ರಿಯಾಂಕ ಗಾಂಧಿ ವಾದ್ರಾ

Krishnaveni K
ಮಂಗಳವಾರ, 29 ಅಕ್ಟೋಬರ್ 2024 (15:00 IST)
ವಯನಾಡು: ತಂದೆಯ ಸಾವಿನ ನಂತರ ಥೆರೇಸಾ ಸಂಸ್ಥೆಯಲ್ಲಿ ಬಾತ್ ರೂಂ ತೊಳೆದು ಕಸ ಗುಡಿಸುವ ಕೆಲಸಗಳನ್ನೂ ಮಾಡುತ್ತಿದ್ದೆ ಎಂದು ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.

ವಯನಾಡು ಉಪಚುನಾವಣೆ ಪ್ರಚಾರ ಕಣದಲ್ಲಿ ಅವರು ಅಬ್ಬರದ ಭಾಷಣ ಮಾಡಿದ್ದಾರೆ. ಈ ವೇಳೆ ತನಗೂ ದಮನಿತರ ಕಷ್ಟ ಏನೆಂದು ಗೊತ್ತು ಎಂದು ಹೇಳಿಕೊಂಡಿದ್ದಾರೆ. ಪ್ರಿಯಾಂಕರನ್ನು ಶ್ರೀಮಂತಿಕೆಯಲ್ಲಿ ಬೆಳೆದವರು, ಕಷ್ಟ ಗೊತ್ತಿಲ್ಲ ಎಂದೇ ಹೇಳುತ್ತಾರೆ. ಆದರೆ ತನಗೂ ಕಷ್ಟ ಏನೆಂದು ಗೊತ್ತು ಎಂದು ಅವರು ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

ತಂದೆ ರಾಜೀವ್ ಗಾಂಧಿ ಹತ್ಯೆ ಬಳಿಕ ನಾನೂ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದೇನೆ. ಮದರ್ ಥೆರೆಸಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೆ. ಅಲ್ಲಿ ಬಾತ್ ರೂಂ ತೊಳೆಯುವುದರಿಂದ ಹಿಡಿದು ಮಕ್ಕಳಿಗೆ ಇಂಗ್ಲಿಷ್ ಪಾಠ ಮಾಡುವುದರವರೆಗೆ ಎಲ್ಲಾ ಕೆಲಸ ಮಾಡಿದ್ದೆ. ಹೀಗಾಗಿ ಆಗ ನನಗೆ ತುಳಿತಕ್ಕೊಳಗಾದವರ ನೋವು ಏನೆಂದು ಅರ್ಥವಾಗಿತ್ತು ಎಂದಿದ್ದಾರೆ.

ಥೆರೆಸಾ ಸಂಸ್ಥೆಯಲ್ಲಿ ಬಾತ್ ರೂಂ ತೊಳೆಯುತ್ತಿದ್ದೆ, ಪಾತ್ರೆ ತೊಳೆಯುತ್ತಿದ್ದೆ. ಕೆಲವು ಮಕ್ಕಳಿಗೆ ಪಾಠ ಮಾಡುತ್ತಿದ್ದೆ. ನನ್ನ ತಂದೆ ಸಾವಿನ ಬಳಿಕ ಬೇಸರದಲ್ಲಿದ್ದ ನನ್ನನ್ನು ಸ್ವತಃ ಮದರ್ ಥೆರೆಸಾ ಸಹಾನುಭೂತಿಯಿಂದ ಅವರ ಸಂಸ್ಥೆಯಲ್ಲಿ ಕೆಲಸ ಮಾಡಲು ಹೇಳಿದರು.  ಆಗಲೇ ನಾನು ಒಂದು ಸಮುದಾಯಕ್ಕಾಗಿ ಹೇಗೆ ಕೆಲಸ ಮಾಡಬಹುದು ಎಂದು ಕಲಿತೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments