ಪ್ರಿಯಾಂಕ ಗಾಂಧಿ ಇಂದು ಲೋಕಸಭೆಗೆ ಎಂಟ್ರಿ: ಸಂಸತ್ ನಲ್ಲಿ ಫ್ಯಾಮಿಲಿ ಸಮೇತ ಇರುವವರ ಲಿಸ್ಟ್ ಇಲ್ಲಿದೆ

Krishnaveni K
ಗುರುವಾರ, 28 ನವೆಂಬರ್ 2024 (10:58 IST)
ನವದೆಹಲಿ: ವಯನಾಡಿನಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಭಾರೀ ಅಂತರದಿಂದ ಗೆದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಇದೇ ಮೊದಲ ಬಾರಿಗೆ ಸಂಸತ್ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ರಾಹುಲ್ ಗಾಂಧಿಗೆ ಸಂಸತ್ ನಲ್ಲಿ ಸಾಥ್ ನೀಡಲಿದ್ದಾರೆ.

ಈ ಮೂಲಕ ಈಗ ಗಾಂಧಿ ಪರಿವಾರದ ಎಲ್ಲರೂ ಸಂಸತ್ ನಲ್ಲರುವಂತಾಗಿದೆ. ರಾಹುಲ್ ಗಾಂಧಿ ಲೋಕಸಭೆಯ ವಿಪಕ್ಷ ನಾಯಕನಾದರೆ ಪ್ರಿಯಾಂಕ ಈಗ ಮೊದಲ ಬಾರಿಗೆ ಸಂಸತ್ ಸದಸ್ಯೆಯಾಗಿ ತಮ್ಮನಿಗೆ ಸಾಥ್ ನೀಡಲಿದ್ದಾರೆ. ತಾಯಿ ಸೋನಿಯಾ ಗಾಂಧಿ ರಾಜ್ಯ ಸಭಾ ಸದಸ್ಯರಾಗಿದ್ದಾರೆ. ಆ ಮೂಲಕ ಗಾಂಧಿ ಕುಟುಂಬದ ಎಲ್ಲರೂ ಸಂಸತ್ ನಲ್ಲಿದ್ದಂತಾಗುತ್ತದೆ. ಇವರಲ್ಲದೆ, ಇನ್ನೂ ಕೆಲವರು ಫ್ಯಾಮಿಲಿ ಸಮೇತ ಸಂಸತ್ ಸದಸ್ಯರಾಗಿದ್ದಾರೆ. ಅವರು ಯಾರೆಲ್ಲಾ ಎಂದು ಇಲ್ಲಿದೆ ನೋಡಿ ಲಿಸ್ಟ್.

ಅಖಿಲೇಶ್ ಯಾದವ್-ಡಿಂಪಲ್ ಯಾದವ್: ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಇಬ್ಬರೂ ಲೋಕಸಭೆಯ ಸದಸ್ಯರಾಗಿದ್ದಾರೆ. ಅಖಿಲೇಶ್ ಕನೌಜ್ ಕ್ಷೇತ್ರದ ಸಂಸದರಾಗಿದ್ದರೆ ಅವರ ಪತ್ನಿ ಡಿಂಪಲ್ ಮೈನ್ ಪುರಿ ಸಂಸದೆಯಾಗಿದ್ದಾರೆ.

ಶರದ್ ಪವಾರ್-ಸುಪ್ರಿಯಾ ಸುಳೆ: ಹಿರಿಯ ನಾಯಕ ಶರದ್ ಪವಾರ್ ರಾಜ್ಯ ಸಭಾ ಸದಸ್ಯರಾಗಿದ್ದರೆ ಅವರ ಪುತ್ರಿ ಸುಪ್ರಿಯ ಸುಳೆ ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಸಂಸದೆಯಾಗಿದ್ದು ಲೋಕಸಭೆಯಲ್ಲಿದ್ದಾರೆ.

ಕನಿಮೊಳಿ-ದಯಾನಿದಿ ಮಾರನ್: ತಮಿಳುನಾಡಿನ ಮಾಜಿ ಸಿಎಂ ದಿವಂಗತ ಕರುಣಾನಿಧಿ ಪುತ್ರಿ ಕನಿಮೊಳಿ ತೂತುಕುಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿದ್ದರೆ  ಮೊಮ್ಮಗ ದಯಾನಿದಿ ಮಾರನ್ ಚೆನ್ನೈ ಸೆಂಟ್ರಲ್ ಕ್ಷೇತ್ರದ ಸಂಸದರಾಗಿ ಲೋಕಸಭೆಯಲ್ಲಿದ್ದಾರೆ.

ಪಿ ಚಿದಂಬರಂ-ಕಾರ್ತಿ ಚಿದಂಬರಂ: ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ರಾಜ್ಯ ಸಭಾ ಸದಸ್ಯರಾಗಿದ್ದರೆ ಅವರ ಪುತ್ರ ಕಾರ್ತಿ ಚಿದಂಬರಂ ಶಿವಗಂಗಾ ಲೋಕಸಭಾ ಕ್ಷೇತ್ರದ ಸಂಸದರಾಗಿ ಲೋಕಸಭೆಯಲ್ಲಿದ್ದಾರೆ.

ಪಪ್ಪು ಯಾದವ್-ರಂಜೀತ್ ರಂಜನ್: ಬಿಹಾರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಪ್ಪು ಯಾದವ್ ಲೋಕಸಭೆ ಸದಸ್ಯರಾಗಿದ್ದರೆ ಅವರ ಪತ್ನಿ ರಂಜೀತ್ ರಂಜನ್ ಛತ್ಥೀಸ್ ಘಡದಿಂದ ರಾಜ್ಯಸಭೆಯ ಸದಸ್ಯರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments