Webdunia - Bharat's app for daily news and videos

Install App

ಯುಪಿಯಲ್ಲಿ ಪ್ರಿಯಾಂಕಾ ಪಾತ್ರ; ನಿರ್ಧಾರ ಅವರಿಗೆ ಮತ್ತು ಅವರ ಕುಟುಂಬಕ್ಕೆ ಬಿಟ್ಟಿದ್ದು: ಕಾಂಗ್ರೆಸ್

Webdunia
ಗುರುವಾರ, 30 ಜೂನ್ 2016 (15:17 IST)
ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಮರಳಿ ಗಳಿಸಲು ಪ್ರಿಯಾಂಕ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಬೇಕು ಎಂಬ ಒತ್ತಾಯಗಳ ಮಧ್ಯೆ ಈ ನಿರ್ಧಾರ ಪ್ರಿಯಾಂಕಾ, ಅವರ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿಯವರಿಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಹೇಳಿದೆ. 
 
ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಎಷ್ಟರಮಟ್ಟಿಗೆ ಪಾತ್ರ ವಹಿಸಬೇಕು ಎಂಬುದನ್ನು ತಮ್ಮ ತಾಯಿ ಮತ್ತು ಅಣ್ಣನ ಜತೆ ಸೇರಿ ಅವರೇ ನಿರ್ಧರಿಸುತ್ತಾರೆ ಎಂದು ಪಕ್ಷದ ವಕ್ತಾರೆ ಶೋಭಾ ಓಜಾ ತಿಳಿಸಿದ್ದಾರೆ.
 
ತಮ್ಮ ತಾಯಿ ಮತ್ತು ಸಹೋದರ ಪ್ರತಿನಿಧಿಸುವ ರಾಯ್ ಬರೇಲಿ ಮತ್ತು ಅಮೇಥಿ ಹೊರತು ಪಡಿಸಿ ಉಳಿದೆಡೆಗಳಲ್ಲಿ ಪ್ರಚಾರ ನಡೆಸುತ್ತಾರಾ? ಉತ್ತರ ಪ್ರದೇಶ ಚುನಾವಣೆಯಲ್ಲಿ ಅವರ ಪಾತ್ರವೇನು? ಎಂಬುದಾಗಿ ಕೇಳಿದ ಪ್ರಶ್ನೆಗೆ ಓಜಾ ಈ ರೀತಿಯಲ್ಲಿ ಉತ್ತರಿಸಿದ್ದಾರೆ. 
 
ಯುಪಿಯ ಉಸ್ತುವಾರಿ ವಹಿಸಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್ ನಬಿ ಆಜಾದ್, ಪ್ರಿಯಾಂಕಾ ರಾಜ್ಯಾದ್ಯಂತ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದ್ದರು. 
 
ಶೀಘ್ರದಲ್ಲಿಯೇ ತಾವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 28ರಲ್ಲಷ್ಟೇ ಗೆಲುವನ್ನು ಸಾಧಿಸಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments