Webdunia - Bharat's app for daily news and videos

Install App

ಪನ್ನೀರ್‌ಸೆಲ್ವಂಗೆ ಜೀವ ಬೆದರಿಕೆ: ಶಶಿಕಲಾ ಬೆಂಬಲಿಗನ ವಿರುದ್ಧ ದೂರು ದಾಖಲು

Webdunia
ಸೋಮವಾರ, 13 ಫೆಬ್ರವರಿ 2017 (17:02 IST)
ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ಶಶಿಕಲಾ ಪರ ಹಿರಿಯ ಮುಖಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ಎಐಎಡಿಎಂಕೆ ದಕ್ಷಿಣ ಚೆನ್ನೈನ ಕಾರ್ಯದರ್ಶಿ, ಮಾಜಿ ಶಾಸಕ ವಿ.ಪಿ.ಕಲೈರಾಜನ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ಆದರೆ, ಪನ್ನೀರ್‌ಸೆಲ್ವಂಗೆ ಜೀವ ಬೆದರಿಕೆಯೊಡ್ಡಿರುವುದನ್ನು ತಳ್ಳಿಹಾಕಿದ ವಿ.ಪಿ.ಕಲೈರಾಜನ್, ಇದೊಂದು ಸೇಡಿನ ರಾಜಕೀಯಕ್ಕೆ ಉದಾಹರಣೆ ಎಂದು ತಿರುಗೇಟು ನೀಡಿದ್ದಾರೆ. 
 
ಇತ್ತೀಚೆಗೆ ಶಶಿಕಲಾ ವಿರುದ್ಧ ಪನ್ನೀರ್‌ಸೆಲ್ವಂ ಬಹಿರಂಗ ಸಮರ ಸಾರಿದಾಗ ಕಲೈರಾಜನ್ ಸೆಲ್ವಂ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.  
 
ಕಳೆದ ಫೆಬ್ರವರಿ 5 ರಂದು ಶಶಿಕಲಾ ನಟರಾಜನ್ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ನಂತರ ಪನ್ನೀರ್ ಸೆಲ್ವಂ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಶಶಿಕಲಾ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲಾಗಿತ್ತು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments