Webdunia - Bharat's app for daily news and videos

Install App

ಪನ್ನೀರ್‌ಸೆಲ್ವಂಗೆ ಜೀವ ಬೆದರಿಕೆ: ಶಶಿಕಲಾ ಬೆಂಬಲಿಗನ ವಿರುದ್ಧ ದೂರು ದಾಖಲು

Webdunia
ಸೋಮವಾರ, 13 ಫೆಬ್ರವರಿ 2017 (17:02 IST)
ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ಶಶಿಕಲಾ ಪರ ಹಿರಿಯ ಮುಖಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ಎಐಎಡಿಎಂಕೆ ದಕ್ಷಿಣ ಚೆನ್ನೈನ ಕಾರ್ಯದರ್ಶಿ, ಮಾಜಿ ಶಾಸಕ ವಿ.ಪಿ.ಕಲೈರಾಜನ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ಆದರೆ, ಪನ್ನೀರ್‌ಸೆಲ್ವಂಗೆ ಜೀವ ಬೆದರಿಕೆಯೊಡ್ಡಿರುವುದನ್ನು ತಳ್ಳಿಹಾಕಿದ ವಿ.ಪಿ.ಕಲೈರಾಜನ್, ಇದೊಂದು ಸೇಡಿನ ರಾಜಕೀಯಕ್ಕೆ ಉದಾಹರಣೆ ಎಂದು ತಿರುಗೇಟು ನೀಡಿದ್ದಾರೆ. 
 
ಇತ್ತೀಚೆಗೆ ಶಶಿಕಲಾ ವಿರುದ್ಧ ಪನ್ನೀರ್‌ಸೆಲ್ವಂ ಬಹಿರಂಗ ಸಮರ ಸಾರಿದಾಗ ಕಲೈರಾಜನ್ ಸೆಲ್ವಂ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.  
 
ಕಳೆದ ಫೆಬ್ರವರಿ 5 ರಂದು ಶಶಿಕಲಾ ನಟರಾಜನ್ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ನಂತರ ಪನ್ನೀರ್ ಸೆಲ್ವಂ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಶಶಿಕಲಾ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲಾಗಿತ್ತು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments