Webdunia - Bharat's app for daily news and videos

Install App

ನಂಬಿದ್ರೆ ನಂಬಿ ಬಿಟ್ಟರೆ ಬಿಡಿ: ಈ ಗ್ರಾಮದಲ್ಲಿ ವೇಶ್ಯಾವಾಟಿಕೆ ಕಡ್ಡಾಯ

Webdunia
ಸೋಮವಾರ, 4 ಡಿಸೆಂಬರ್ 2023 (12:50 IST)
ನವದೆಹಲಿಯಿಂದ ಕೇವಲ 200 ಕಿ.ಮೀ ದೂರದಲ್ಲಿರುವ ರಾಜಸ್ಥಾನದ ಭರತ್‌ಪುರ್ ಜಿಲ್ಲೆಯ ಖಾಕ್ರನಾಗ್ಲಾ ಗ್ರಾಮದಲ್ಲಿ ಬೇಡಿಯಾ ಸಮುದಾಯ ವಾಸವಾಗಿದೆ. ಗ್ರಾಮದಲ್ಲಿ ಆಸ್ಪತ್ರೆಗಳಿಲ್ಲ. ವಿದ್ಯುತ್ ಸಂಪರ್ಕವಂತೂ ಇಲ್ಲವೇ ಇಲ್ಲ. ಶಿಥಿಲಾವಸ್ಥೆಯಲ್ಲಿರುವ ಹರಕು ಮನೆಗಳಲ್ಲಿ ಬುಡಕಟ್ಟು ಸಮುದಾಯ ವಾಸವಾಗಿದೆ. ಈ ಗ್ರಾಮದಲ್ಲಿ ವೇಶ್ಯಾವಾಟಿಕೆ ಪ್ರತಿಯೊಂದು ಮನೆಯ ಸಂಪ್ರದಾಯವಾಗಿದೆ.
 
ದೇಶದಲ್ಲಿ ಹೆಣ್ಣು ಮಗುವೆಂದರೆ ಕುಟುಂಬಕ್ಕೆ ಭಾರ ಎನ್ನುವಂತೆ ಪರಿಗಣಿಸಿ ಕೆಲವು ಬಾರಿ ಭ್ರೂಣ ಹತ್ಯೆ ಮಾಡಲಾಗುತ್ತದೆ. ಆದರೆ, ರಾಜಸ್ಥಾನದ ಬೇಡಿಯಾ ಬುಡಕಟ್ಟು ಸಮುದಾಯ ಕುಟುಂಬದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ.
 
ರಾಜಸ್ಥಾನದ ಬೇಡಿಯಾ ಬುಡಕಟ್ಟು ಸಂಪ್ರದಾಯದಲ್ಲಿ ಹೆಣ್ಣಿನ ಬಗೆಗಿನ ಅಭಿಪ್ರಾಯ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿದೆ. ಹೆಣ್ಣು ಮಗು ಹರೆಯಕ್ಕೆ ಬಂದಾಗ ವೇಶ್ಯಾವಾಟಿಕೆಗೆ ತಳ್ಳುವಂತಹ ಸಂಪ್ರದಾಯ ನೂರಾರು ವರ್ಷಗಳಿಂದ ಬೆನ್ನಟ್ಟಿ ಬಂದಿದೆ.
 
ಗ್ರಾಮದಲ್ಲಿ ಅಂದಾಜು 59 ಕುಟುಂಬಗಳಿವೆ. ಮನೆಯಲ್ಲಿರುವ ಯುವತಿಯರು ವೇಶ್ಯಾವಾಟಿಕೆ ನಡೆಸುವುದು ಕಡ್ಡಾಯವಾಗಿದೆ. ಹಿಂದೆ ಜಮೀನುದಾರಿ ವ್ಯವಸ್ಥೆ ಜಾರಿಯಲ್ಲಿರುವ ಸಂದರ್ಭದಲ್ಲಿ ಬೇಡಿಯಾ ಕುಟುಂಬದ ಯುವತಿಯರು ನೃತ್ಯಗಾರ್ತಿಯರಾಗಿ ಕೆಲಸ ನಿರ್ವಹಿಸುತ್ತಿದ್ದರು. ಜಮೀನುದಾರರ ಸಂತೋಷಕ್ಕಾಗಿ ಅವರ ಮುಂದೆ ಯುವತಿಯರು ನೃತ್ಯ ಮಾಡುತ್ತಿದ್ದರು.
 
ಜಮೀನುದಾರಿ ವ್ಯವಸ್ಥೆ ಹೋದ ನಂತರ ಆದಾಯವಿಲ್ಲದೇ ತತ್ತರಿಸಿದ ಬೇಡಿಯಾ ಕುಟುಂಬಗಳು ಹೊಟ್ಟೆಪಾಡಿಗಾಗಿ ವೇಶ್ಯಾವಾಟಿಕೆಗೆ ಮೊರೆಹೋಗಿವೆ.
 
ಮನೆಯಲ್ಲಿರುವ 13 ರಿಂದ 15 ವರ್ಷ ವಯಸ್ಸಿನ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಅರ್ಹರಾಗಿರುತ್ತಾರೆ. ಹಣದಾಸೆಗಾಗಿ ಅದಕ್ಕಿಂತ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳನ್ನು ಕೂಡಾ ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿದೆ ಎನ್ನುವ ಆರೋಪಗಳಿವೆ.
 
ಬಾಲಕಿಯರು 13 ವರ್ಷದವರಾದ ನಂತರ ಕುಟುಂಬದ ಸದಸ್ಯರು 'ನಾಥ್ ಉತ್ರೈ' ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿ ಅಧಿಕೃತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ. ಅಂದು ಬಾಲಕಿಯನ್ನು ಮದುವಣಗಿತ್ತಿಯಾಗಿ ಸಿಂಗರಿಸಿ ಅತಿ ಹೆಚ್ಚು ಹಣ ನೀಡಲು ಸಿದ್ದವಾದ ವಿಟಪುರುಷನನ್ನು ಮದುಮಗನಾಗಿ ಸಿಂಗರಿಸಿ ಮೊದಲ ರಾತ್ರಿ ನಡೆಸಲಾಗುತ್ತದೆ. ನಂತರ ಅವಳು ವೇಶ್ಯಾವಾಟಿಕೆಯನ್ನು ಮುಂದುವರಿಸುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಮುಂದಿನ ಸುದ್ದಿ
Show comments