Webdunia - Bharat's app for daily news and videos

Install App

ವೇಶ್ಯಾವಾಟಿಕೆಯನ್ನು ಕಾನೂನುಬದ್ದಗೊಳಿಸಬೇಕು ಎಂದು ಹೇಳಿದವರು ಯಾರು ಗೊತ್ತಾ?

Webdunia
ಶನಿವಾರ, 7 ಜುಲೈ 2018 (14:15 IST)
ಹೈದರಾಬಾದ್ : ವೇಶ್ಯಾವಾಟಿಕೆಯನ್ನು ಕಾನೂನುಬದ್ದಗೊಳಿಸಬೇಕು  ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಸಲಹೆ ನೀಡಿದ್ದಾರೆ.


ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆ ಯೊಂದಿಗೆ ಮಾತನಾಡಿದ ಅವರು, ‘ಕೆಲವೊಂದು ದುರಾಚಾರಗಳನ್ನು ಯಾವುದೇ ಕಾನೂನಿನಿಂದ ನಿರ್ಮೂ ಲನೆ ಅಸಾಧ್ಯ. ಯಾರಾದರೂ ಇಂಥ ಅಭಿಪ್ರಾಯ ಹೊಂದಿದ್ದರೆ ಅವರು ಮೂರ್ಖರ ಸ್ವರ್ಗದಲ್ಲಿದ್ದಾರೆ ಎಂದರ್ಥ. ಈ ಹಿಂದೆ ಮದ್ಯ ನಿಷೇಧ ಮಾಡಲಾಗಿತ್ತು. ಆದರೂ ಅಕ್ರಮ ಮದ್ಯ ಉತ್ಪಾದನೆ, ಮಾರಾಟ ನಡೆದೇ ಇತ್ತು. ಸರ್ಕಾರಕ್ಕೆ ತೆರಿಗೆ ಆದಾಯ ನಷ್ಟವಾಗಿದ್ದು ಬಿಟ್ಟರೆ ಬೇರೇನೂ ಸಾಧಿಸಲಾಗಲಿಲ್ಲ. ಅದೇ ರೀತಿ ಕ್ರೀಡಾ ಬೆಟ್ಟಿಂಗ್ ಕೂಡಾ. ನಿಷೇಧ ಹೇರುವ ಮೂಲಕ ಅದನ್ನು ತಡೆಯಲಾಗದು’ ಎಂದು ಹೇಳಿದ್ದಾರೆ.


 ಇದೇ ವೇಳೆ ವೇಶ್ಯಾವಾಟಿಕೆಯನ್ನೂ ಕಾನೂನುಬದ್ಧಗೊಳಿಸಬೇಕೇ ಎಂಬ ಪ್ರಶ್ನೆಗೆ 'ಹೌದು. ಇದನ್ನೂ ಕಾನೂನುಬದ್ಧಗೊಳಿಸಬೇಕು. ಈಗ ನಿಷೇಧ ಇದ್ದರೂ ಎಲ್ಲೆಡೆ ವೇಶ್ಯಾವಾಟಿಕೆ ಅವ್ಯಾಹತವಾಗಿ ನಡೆದಿದೆ. ವೇಶ್ಯಾವಾಟಿಕೆ ಇದೀಗ ಉದ್ಯಮವಾಗಿದೆ. ಯಾವುದೇ ಊರಿನಲ್ಲಿ ವೇಶ್ಯಾವಾಟಿಕೆ ಇಲ್ಲ ಎಂಬುದನ್ನು ತೋರಿಸಿ. ಹೀಗಾಗಿ ಇದನ್ನು ಕಾನೂನುಬದ್ಧಗೊಳಿಸಿ, ಅದಕ್ಕೆ ಲೈಸೆನ್ಸ್ ನೀಡಬೇಕು. ಆಗ ಮಾತ್ರ ವೇಶ್ಯಾವಾಟಿಕೆ ಮೇಲೆ ನಿಯಂತ್ರಣ ಸಾಧಿಸಬಹುದು. ನೈತಿಕತೆಯನ್ನು ಕಾನೂನಿನ ಮೂಲಕ ನಿಯಂತ್ರಿಸಲಾಗದು. ಇದನ್ನು ಧರ್ಮ ಮತ್ತು ಧಾರ್ಮಿಕ ನಾಯಕರು ಮಾತ್ರವೇ ಮಾಡಬಹುದು ಎಂದು ನ್ಯಾ. ಹೆಗ್ಡೆ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments