Webdunia - Bharat's app for daily news and videos

Install App

ಬಾಲೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ತುಟಿಗಳನ್ನು ತಿಂದ ಕಾಮುಕ

Webdunia
ಶನಿವಾರ, 30 ಸೆಪ್ಟಂಬರ್ 2017 (18:33 IST)
ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ, 4 ವರ್ಷ ವಯಸ್ಸಿನ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರು ಆರೋಪಿ ಸುಖರಾಜ್ ಸೈಕೋ ಕಿಲ್ಲರ್‌ನನ್ನು ಪೊಲೀಸರ ವಶಕ್ಕೊಪ್ಪಿಸಿದ್ದಾರೆ.
ಗ್ರಾಮಸ್ಥರು ಹಲವಾರು ವರ್ಷಗಳಿಂದ ಗ್ರಾಮದಲ್ಲಿ ಆರೋಪಿ ಸುಖರಾಜ್ ಹೇಗೆ ವಿವಿಧ ತೊಂದರೆಗಳನ್ನು ಉಂಟುಮಾಡಿದ್ದಾನೆ ಎಂಬ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಖರಾಜ್ ತನ್ನ ಗ್ರಾಮದಲ್ಲಿಯೇ 8 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿದ್ದಾನೆ ಎನ್ನಲಾಗಿದೆ.
 
ವರದಿಗಳ ಪ್ರಕಾರ, ಹಲವಾರು ಘಟನೆಗಳು ವರದಿಯಾದ ಬಳಿಕ ಗ್ರಾಮಸ್ಥರು ಸುಖರಾಜ್‌ನನ್ನು ಬಹಿಷ್ಕರಿಸಿದ್ದರು. ಬಹಿಷ್ಕಾರದ ಅವಧಿ ಮುಕ್ತಾಯದ ನಂತರ ಗ್ರಾಮಕ್ಕೆ ಹಿಂದುರಿಗಿದ ಸುಖರಾಜ್, ತಮ್ಮ ಗುಣಗಳಲ್ಲಿ ಯಾವುದೇ ಬದಲಾವಣೆ ತಾರದೇ ಬಾಲಕಿಯರ ಮೇಲೆ ಅತ್ಯಾಚಾರವೆಸಗುವುದನ್ನೇ ಕಾಯಕವಾಗಿಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.
 
ಆರೋಪಿ ಸುಖರಾಜ್ ಗ್ರಾಮದಲ್ಲಿನ 4 ವರ್ಷದ ಬಾಲಕಿಗೆ ಚಾಕೋಲೆಟ್ ಆಮಿಷ ತೋರಿಸಿ, ಬಾಲಕಿಯೊಂದಿಗೆ ಗೆಳೆತನ ಸಂಪಾದಿಸಿದ್ದ. ಒಂದು ದಿನ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಹತ್ಯೆಗೈದಿದ್ದ. ಬಾಲಕಿಯ ತುಟಿಗಳನ್ನು ಕತ್ತರಿಸಿ ತಿಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ಸುಖರಾಜ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ