Tahawwur Rana: ನೂರಾರು ಜನರನ್ನು ಕೊಂದ ಉಗ್ರ ರಾಣಾಗೆ ಬಿರಿಯಾನಿ ತಿನ್ನಿಸಿ ಕೂರಿಸಬೇಡಿ

Krishnaveni K
ಶುಕ್ರವಾರ, 11 ಏಪ್ರಿಲ್ 2025 (10:46 IST)
ನವದೆಹಲಿ: ಮುಂಬೈ ಮೇಲೆ 2008 ರಲ್ಲಿ ನಡೆಸಿದ ಉಗ್ರ ದಾಳಿಯ ಪ್ರಮುಖ ರೂವಾರಿ ರಾಣಾನನ್ನು ಎನ್ಐಎ ಅಧಿಕಾರಿಗಳು ಅಮೆರಿಕಾದಿಂದ ಭಾರತಕ್ಕೆ ಕರೆತಂದಿದ್ದಾರೆ. ಆದರೆ ಆತನನ್ನು ಭಾರತಕ್ಕೆ ಕರೆತಂದ ಸುದ್ದಿ ಬೆನ್ನಲ್ಲೇ ಸಾರ್ವಜನಿಕರು ಆತನಿಗೆ ಬಿರಿಯಾನಿ ಕೊಟ್ಟು ಕೂರಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2008 ರಲ್ಲಿ ಮುಂಬೈ ಮೇಲೆ ನಡೆದ ಉಗ್ರ ದಾಳಿಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಸಮುದ್ರ ಮಾರ್ಗ ಮೂಲಕ ಮುಂಬೈಗೆ ಕಾಲಿಟ್ಟಿದ್ದು ಉಗ್ರರು ನೂರಾರು ಜನರನ್ನು ಹತ್ಯೆ ಮಾಡಿದ್ದರು. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ರಾಣಾ ಕೂಡಾ ಒಬ್ಬ.

ಈತನನ್ನು ಅಮೆರಿಕಾ ಭಾರತಕ್ಕೆ ಗಡೀಪಾರು ಮಾಡಿದೆ. ಇದರ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಭಾರತಕ್ಕೆ ಕರೆತಂದಿದ್ದಾರೆ. ಇದೀಗ ಆತನನ್ನು ತಿಹಾರ್ ಜೈಲಿನಲ್ಲಿ ಇಡಲಾಗುತ್ತದೆ. ಆತನಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿಕ್ರಿಯಿಸಿರುವ ಜನರು, ನೂರಾರು ಜನರ ಸಾವಿಗೆ ಕಾರಣನಾಗಿರುವ ಈ ಉಗ್ರನಿಗೆ ಬಿರಿಯಾನಿ, ರಾಜಾತಿಥ್ಯ ಕೊಟ್ಟು ಜೈಲಿನಲ್ಲಿ ಕೂರಿಸಬೇಡಿ. ತಕ್ಷಣವೇ ವಿಚಾರಣೆ ಮುಗಿಸಿ ನೇಣಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ. ಆಗ ಮಾತ್ರ ಅಂದು ಹುತಾತ್ಮರಾದ ಯೋಧರು, ಪೊಲೀಸರು ಮತ್ತು ಜನರಿಗೆ ನ್ಯಾಯ ಸಿಗಲು ಸಾಧ್ಯ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments