ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

Krishnaveni K
ಬುಧವಾರ, 13 ಆಗಸ್ಟ್ 2025 (12:20 IST)
ನವದೆಹಲಿ: ಬೀದಿನಾಯಿಗಳನ್ನು ಎತ್ತಂಗಡಿ ಮಾಡಿ ಆಶ್ರಯ ಕೇಂದ್ರಕ್ಕೆ ಹಾಕಬೇಕು ಎಂದು ಸುಪ್ರೀಂಕೋರ್ಟ್ ನೀಡಿದ ಆದೇಶಕ್ಕೆ ಆಕ್ಷೇಪವೆತ್ತಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಒಮ್ಮೆ ರಾತ್ರಿ ಗಲ್ಲಿ ಏರಿಯಾಗೆ ಹೋಗಿ ನೋಡಿ ಎಂದು ಜನ ತಿರುಗೇಟು ನೀಡಿದ್ದಾರೆ.

ದೆಹಲಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಇದರಿಂದ ಜನ ನಿರ್ಭೀತಿಯಿಂದ ಓಡಾಡಲು ಕಷ್ಟವಾಗುತ್ತಿದೆ ಎಂಬ ದೂರು ಬಂದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಎಲ್ಲಾ ಬೀದಿನಾಯಿಗಳನ್ನು  ಶ್ವಾನ ಕೇಂದ್ರಗಳಿಗೆ ರವಾನಿಸುವಂತೆ ಆದೇಶ ನೀಡಿದೆ.

ಆದರೆ ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಆಕ್ಷೇಪವೆತ್ತಿದ್ದಾರೆ. ಈ ಮೂಕಪ್ರಾಣಿಗಳು ಸಮಸ್ಯೆಯಲ್ಲ. ಅವುಗಳಿಗೆ ವ್ಯಾಕ್ಸಿನೇಷನ್, ವಾಸಸ್ಥಳ ಮಾಡಿಕೊಡಬೇಕಾಗಿರುವುದು ನಮ್ಮ ಕರ್ತವ್ಯ.  ಬೀದಿನಾಯಿಗಳನ್ನು ಕರುಣೆಯಿಂದ ನೋಡಬೇಕು ಎಂದು ಟ್ವೀಟ್ ಮಾಡಿದ್ದರು.

ಆದರೆ ರಾಹುಲ್ ಗಾಂಧಿ ಟ್ವೀಟ್ ಗೆ ಅನೇಕರು ಪ್ರತಿಕ್ರಿಯಿಸಿದ್ದು, ಮೊದಲು ನಿಮ್ಮ ಭದ್ರತೆ ಎಲ್ಲಾ ಬಿಟ್ಟು ರಾತ್ರಿ ಗಲ್ಲಿ ಏರಿಯಾಗಳಲ್ಲಿ ತಿರುಗಾಡಿ ನೋಡಿ. ಆಗ ಗೊತ್ತಾಗುತ್ತದೆ ಬೀದಿ ನಾಯಿಗಳಿಂದ ಎಷ್ಟು ತೊಂದರೆಯಾಗುತ್ತದೆ ಎಂದು ಕೆಲವರು ಹೇಳಿದ್ದಾರೆ. ಮತ್ತೆ ಕೆಲವರು ಆ ಬೀದಿ ನಾಯಿಗಳಲ್ಲಿ ಕೆಲವನ್ನಾದರೂ ನೀವು ದತ್ತು ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments