Select Your Language

Notifications

webdunia
webdunia
webdunia
webdunia

ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಕುಮಾರಸ್ವಾಮಿ ಘೋಷಣೆ

ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಕುಮಾರಸ್ವಾಮಿ ಘೋಷಣೆ
ಬೆಂಗಳೂರು , ಬುಧವಾರ, 29 ಸೆಪ್ಟಂಬರ್ 2021 (09:43 IST)
ಬೆಂಗಳೂರು : ಜನವರಿ ತಿಂಗಳ ಸಂಕ್ರಾಂತಿ ದಿನವೇ  2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಕಟಿಸಿದರು.

ಜನತಾ ಪರ್ವ 1.ಔ ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತಮ್ಮ ತೋಟದಲ್ಲಿ ಹ್ಮಮಿಕೊಂಡಿದ್ದ 4 ದಿನಗಳ ಕಾರ್ಯಾಗಾರದ 2ನೇ ದಿನದ ಕೊನೆಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಇಂದಿನ ಕಾರ್ಯಾಗಾರದಲ್ಲಿ ಮುಂದಿನ ಅಭ್ಯರ್ಥಿಗಳಿಗೆ  30 ಅಂಶಗಳ ಅಜೆಂಡಾ ನೀಡಿದ್ದೇವೆ. ಆ ಅಜೆಂಡಾ ಪ್ರಕಾರ ಅವರು ಕೆಲಸ ಮಾಡಿ ತೋರಿಸಬೇಕು. ಅವರೆಲ್ಲರೂ 3 ತಿಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಬೇಕು. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು ಎಂದರು ಅವರು. ನಿಗದಿತ ಅವಧಿಯೊಳಗೆ ಈ ಅಜೆಂಡಾವನ್ನು ಗ್ರಾಮ ಪಂಚಾಯ್ತಿ ಮಟ್ಟಕ್ಕೆ ಅನುಷ್ಠಾನ ಮಾಡಲೇಬೇಕು ಹಾಗೂ ಇದನ್ನು ಪರಿವೇಕ್ಷಣೆ ಮಾಡಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಅವರು ಮಾಹಿತಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯುಟ್ಯೂಬ್ ನೋಡಿ ಗರ್ಭಪಾತ ಮಾಡಿಕೊಳ್ಳಲು ಮುಂದಾದ ಯುವತಿ.. ಮುಂದೇನಾಯ್ತು?