Webdunia - Bharat's app for daily news and videos

Install App

ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಕುಮಾರಸ್ವಾಮಿ ಘೋಷಣೆ

Webdunia
ಬುಧವಾರ, 29 ಸೆಪ್ಟಂಬರ್ 2021 (09:43 IST)
ಬೆಂಗಳೂರು : ಜನವರಿ ತಿಂಗಳ ಸಂಕ್ರಾಂತಿ ದಿನವೇ  2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಕಟಿಸಿದರು.

ಜನತಾ ಪರ್ವ 1.ಔ ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತಮ್ಮ ತೋಟದಲ್ಲಿ ಹ್ಮಮಿಕೊಂಡಿದ್ದ 4 ದಿನಗಳ ಕಾರ್ಯಾಗಾರದ 2ನೇ ದಿನದ ಕೊನೆಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಇಂದಿನ ಕಾರ್ಯಾಗಾರದಲ್ಲಿ ಮುಂದಿನ ಅಭ್ಯರ್ಥಿಗಳಿಗೆ  30 ಅಂಶಗಳ ಅಜೆಂಡಾ ನೀಡಿದ್ದೇವೆ. ಆ ಅಜೆಂಡಾ ಪ್ರಕಾರ ಅವರು ಕೆಲಸ ಮಾಡಿ ತೋರಿಸಬೇಕು. ಅವರೆಲ್ಲರೂ 3 ತಿಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಬೇಕು. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು ಎಂದರು ಅವರು. ನಿಗದಿತ ಅವಧಿಯೊಳಗೆ ಈ ಅಜೆಂಡಾವನ್ನು ಗ್ರಾಮ ಪಂಚಾಯ್ತಿ ಮಟ್ಟಕ್ಕೆ ಅನುಷ್ಠಾನ ಮಾಡಲೇಬೇಕು ಹಾಗೂ ಇದನ್ನು ಪರಿವೇಕ್ಷಣೆ ಮಾಡಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಅವರು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments