Webdunia - Bharat's app for daily news and videos

Install App

ಪುಲ್ವಾಮಾ ದಾಳಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಭಾರೀ ವಿರೋಧ

Webdunia
ಶುಕ್ರವಾರ, 14 ಫೆಬ್ರವರಿ 2020 (12:20 IST)
ನವದೆಹಲಿ: ಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ ನಡೆದು 40 ಸೈನಿಕರು ಹುತಾತ್ಮರಾದ ಘಟನೆಗೆ ಇಂದು ಒಂದು ವರ್ಷ. ಆದರೆ ಈ ಘಟನೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯೊಂದು ಈಗ ಭಾರೀ ಟೀಕೆಗೆ ಗುರಿಯಾಗಿದೆ.


ಪುಲ್ವಾಮಾ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಹುತಾತ್ಮ ಸೈನಿಕರನ್ನು ಸ್ಮರಿಸಿಕೊಂಡಿದ್ದಾರೆ. ಅತ್ತ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಈ ದಾಳಿಯಿಂದ ಲಾಭ ಪಡೆದವರು ಯಾರು ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆದರೆ ರಾಹುಲ್ ಅವರ ಈ ಟ್ವೀಟ್ ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಹುತಾತ್ಮ ಸೈನಿಕರ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ಟೀಕೆ ಮಾಡಿದೆ.

ಟ್ವಿಟರ್ ನಲ್ಲೂ ರಾಹುಲ್ ಸರಣಿ ಪ್ರಶ್ನೆಗಳ ಟ್ವೀಟ್ ಗೆ ಟೀಕೆ ವ್ಯಕ್ತವಾಗಿದ್ದು, ರಾಜಕೀಯಕ್ಕಾಗಿ ಈ ಮಟ್ಟಕ್ಕೆ ಇಳಿಯುತ್ತೀರಾ ಎಂದು ಕೆಲವರು ಪ್ರಶ್ನಿಸಿದರೆ ಮತ್ತೆ ಕೆಲವರು ಯಾರ ಟೀಕೆಗೂ ತಲೆಕೆಡಿಸಿಕೊಳ್ಳದೇ ಬಿಜೆಪಿಯನ್ನು ಪ್ರಶ್ನಿಸುವ ಧೈರ್ಯ ಮಾಡಿದ್ದೀರಿ ಎಂದು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments