Webdunia - Bharat's app for daily news and videos

Install App

ಸಿಧು ಕಾಮಿಡಿ ಶೋನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್

Webdunia
ಶುಕ್ರವಾರ, 24 ಮಾರ್ಚ್ 2017 (10:21 IST)
ಪಂಜಾಬ್ ಸಚಿವರಾದ ಬಳಿಕ ನವಜೋತ್ ಸಿಂಗ್ ಸಿಧು ಧರ್ಮ ಸಂಕಟದಲ್ಲಿ ಸಿಲುಕಿದ್ದರು. ಅತ್ತ ಸಚಿವ ಸ್ಥಾನ, ಇತ್ತ ಕಾಮಿಡಿ ಶೋ. ಯಾವುದನ್ನ ಬಿಡೊದು ಯಾವುದನ್ನ ಮುನ್ನಡೆಸುವುದು ಎಂದು ಗೊಂದಲಕ್ಕೆ ಸಿಲುಕಿದ್ದರು. ಇದೀಗ, ಸಿಧು ಕನ್ ಫ್ಯೂಶನ್`ಗೆ ಪರಿಹಾರ ಸಿಕ್ಕಿದೆ.

ಹೌದು, ಪಂಜಾಬ್`ನ ಅಡ್ವೋಕೇಟ್ ಜನರಲ್ ಅತುಲ್ ನಂದಾ ಅವರು ಸಚಿವ ಸಿಧುಗೆ ಗ್ರೀನ್ ಸಿಗ್ನಲ್ ನೀಡಿದ್ದು, ಸಚಿವರಾಗಿ ಕಾಮಿಡಿ ಶೋನಲ್ಲಿ ಭಾಗವಹಿಸುವುದರಿಂದ ಯಾವುದೇ ಹಿತಾಸಕ್ತಿ ಸಂಘರ್ಷ ಏರ್ಪಡುವುದಿಲ್ಲ. ಇದು ಕಾನೂನು ಬಾಹಿರ ಎಂಬ ಕಾನೂನಿನಲ್ಲೂ ಯಾವುದೇ ಉಲ್ಲೇಖವಿಲ್ಲ ಸ್ಪಷ್ಟಪಡಿಸಿದ್ದಾರೆ.

 ಸಿಎಂ ಅಮರೀಂದರ್ ಸಿಂಗ್ ಸಹ ಅಡ್ವೋಕೇಟ್ ಜನರಲ್ ಅವರಿಂದ ವರದಿ ಪಡೆದಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಸಚಿವ ಸಿಧುಗೆ ನೀಡಿರುವ ಖಾತೆಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎನ್ನಲಾಗಿದೆ.

ಸಚಿವರಾದ ಬಳಿಕವೂ ಕಾಮಿಡಿ ಶೋನಲ್ಲಿ ಭಾಗವಹಿಸುತ್ತೇನೆ ಎಂದು ಸಿಧು ನೀಡಿದ್ದ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಸ್ವತಃ ಸಿಎಂ ಅಮರೀಂದರ್ ಸಿಂಗ್, ಸಿಧು ಕಾಮಿಡಿ ಶೋನಲ್ಲಿ ಭಾಗವಹಿಸುವುದಾದರೆ ಅವರ ಖಾತೆ ಬದಲಿಸುವುದಾಗಿ ಹೇಳಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments