17 ವರ್ಷದ ಹದಿಹರೆಯದ ಯುವತಿಯ ಮೂವರು ಕಾಮುಕರಿಂದ ಅತ್ಯಾಚಾರ

Webdunia
ಸೋಮವಾರ, 30 ಅಕ್ಟೋಬರ್ 2017 (17:26 IST)
17 ವರ್ಷದ ಹದಿ ಹರೆಯದ ಯುವತಿಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ ಹೇಯ ಘಟನೆ ಪಂಜಾಬ್ ರಾಜ್ಯದ ಫಜಿಕಾ ಗ್ರಾಮದಲ್ಲಿ ವರದಿಯಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಯುವತಿಯ ಗುಪ್ತಾಂಗದಿಂದ ರಕ್ತ ಹರಿಯುತ್ತಿದ್ದರೂ ಕುಟುಂಬದವರು ಮರ್ಯಾದೆಗೆ ಹೆದರಿ ಪೊಲೀಸ್ ಠಾಣೆಗೆ ದೂರೂ ನೀಡಲಿಲ್ಲ. ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡಾ ಕೊಡಿಸದಿರುವುದು ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಸ್ಥಳೀಯ ಸರಕಾರಿ ಕಾಲೇಜಿನಲ್ಲಿ ಪಿಯುಸಿ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿರುವ ಸಂದರ್ಭದಲ್ಲಿ ಕಾಮುಕರು ಆಕೆಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿ ಅರಣ್ಯ ಪ್ರದೇಶದೊಳಗೆ ಬಿಸಾಕಿ ಪರಾರಿಯಾಗಿದ್ದರು. ನಂತರ  ಆಕೆಯ ಕುಟುಂಬದವರು ಪತ್ತೆ ಹಚ್ಚಿ ಮನೆಗೆ ಕರೆದುಕೊಂಡು ಹೋಗಿದ್ದರು. ಯುವತಿಯ ಸ್ಥಿತಿಯ ಬಗ್ಗೆ ಗ್ರಾಮಸ್ಥನೊಬ್ಬನು ನಮಗೆ ಮಾಹಿತಿ ನೀಡಿದ್ದರಿಂದ ಅವರ ಮನೆಗೆ ಭೇಟಿ ನೀಡಲಾಗಿತ್ತು. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು ಎಂದು ಜಲಾಲಾಬಾದ್ ಡಿವೈಎಸ್‌ಪಿ ಅಮರ್‌ಜಿತ್ ಸಿಂಗ್ ತಿಳಿಸಿದ್ದಾರೆ. 
 
ಯುವತಿಗೆ ಕೂಡಲೇ ಚಿಕಿತ್ಸೆಯ ಅಗತ್ಯವಿತ್ತು. ಆದರೆ, ಪುತ್ರಿಯ ಮೇಲಿನ ಅತ್ಯಾಚಾರವನ್ನು ಕುಟುಂಬದ ಸದಸ್ಯರು ಮರ್ಯಾದೆ ವಿಷಯವಾಗಿ ಪರಿಗಣಿಸಿ ಆಸ್ಪತ್ರೆಗೆ ದಾಖಲಿಸದಿದ್ದರಿಂದ ಸಾವನ್ನಪ್ಪಿದ್ದಾಳೆ. ಮೂವರು ಕಾಮುಕರನ್ನು ಇಲ್ಲಿಯವರೆಗೆ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
 
ಯುವತಿಯ ಸಹಪಾಠಿಯಾಗಿದ್ದ ಆರೋಪಿಯನ್ನು ಆಕೆಯ ತಾಯಿ ಗುರುತಿಸಿದ್ದಾಳೆ. ಒಟ್ಟು ಮೂವರು ಅಪ್ರಾಪ್ತರು ಅತ್ಯಾಚಾರವೆಸಗಿರುವ ಸಾಧ್ಯತೆಗಳಿವೆ. ಅಪರಿಚಿತ ಆರೋಪಿಗಳ ವಿರುದ್ಧ ಅತ್ಯಾಚಾರ, ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮರ್‌ಜಿತ್ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments