ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೇ ಒಡಿಶಾದ ಪುರಿ ಜಗನ್ನಾಥ ದೇವಾಲಯದ ನಾಲ್ಕು ಬಾಗಿಲು ಭಕ್ತರಿಗಾಗಿ ಓಪನ್

Krishnaveni K
ಗುರುವಾರ, 13 ಜೂನ್ 2024 (11:02 IST)
ಪುರಿ: ಈ ವಿಧಾನಸಭೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುತ್ತಿದ್ದಂತೇ ಒಡಿಶಾದಲ್ಲಿರುವ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ತೆರೆಯಲು ಅನುಮತಿ ನೀಡಲಾಗಿದೆ.

ಒಡಿಯಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಇಂತಹದ್ದೊಂದು ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ಮಾಝಿ ಗುರುವಾರದಿಂದಲೇ ಪುರಿಯ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ತೆರೆಯಲು ಆದೇಶ ನೀಡಿದ್ದಾರೆ.

ಅಲ್ಲದೆ  ದೇವಸ್ಥಾನದ ಅಭಿವೃದ್ಧಿಗಾಗಿ 500 ಕೋಟಿ ರೂ.ಗಳ ಅನುದಾನವನ್ನೂ ಘೋಷಿಸಿದ್ದಾರೆ. ಇದಕ್ಕಾಗಿ ನಿನ್ನೆಯೇ ಇಲ್ಲಿನ ಸಂಸದ ಸಂಬಿತ್ ಪಾತ್ರಾ ಮತ್ತು ನೂತನ ಸಚಿವರ ತಂಡವೊಂದು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಿ ದೇವಾಲಯದ ನಾಲ್ಕು ದ್ವಾರಗಳನ್ನು ತೆರೆಯುವ ಬಗ್ಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದನ್ನೀಗ ಪೂರೈಸಿದೆ.

ಇಲ್ಲಿವರೆಗೆ ದೇವಾಲಯಕ್ಕೆ ಭಕ್ತರಿಗೆ ಒಂದು ದ್ವಾರದ ಮೂಲಕ ಮಾತ್ರ ಪ್ರವೇಶ ಕಲ್ಪಿಸಲಾಯಿತು. ಕೋವಿಡ್ ಸಂದರ್ಭದಲ್ಲಿ ಅಂದಿನ ನವೀನ್ ಪಾಟ್ಯಾಯಕ್ ನೇತೃತ್ವದ ಸರ್ಕಾರ ಉಳಿದ ಗೇಟ್ ಗಳನ್ನು ಮುಚ್ಚಿತ್ತು. ಕೊವಿಡ್ ಬಳಿಕ ಎಲ್ಲಾ ದ್ವಾರಗಳನ್ನು ತೆರೆಯಬೇಕು ಎಂದು ಒತ್ತಾಯಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments