Webdunia - Bharat's app for daily news and videos

Install App

ಅನುಪಮಾ ರಾಜೀನಾಮೆ ತಡೆಹಿಡಿಯಲು ಸಿಎಂ ನಿರ್ದೇಶನ

Webdunia
ಬುಧವಾರ, 8 ಜೂನ್ 2016 (12:56 IST)
ಡಿವೈಎಸ್‌ಪಿ ಅನುಪಮ ಶೆಣೈ ಪರವಾಗಿ ಸಾರ್ವಜನಿಕ ಸಹಾನುಭೂತಿ ವ್ಯಕ್ತವಾಗುತ್ತಿರುವುದರ ನಡುವೆ ಅವರ ರಾಜೀನಾಮೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ & ಐಜಿಪಿ ಓಂ ಪ್ರಕಾಶ್ ಅವರಿಗೆ ನಿರ್ದೇಶನ ನೀಡಿದ್ದಾರೆ.
 
ಜತೆಗೆ ಅನುಪಮಾ ಅವರದೆನ್ನಲಾದ ಫೇಸ್‌ಬುಕ್‌ನಲ್ಲಿ ಪ್ರಕಟವಾಗುತ್ತಿರುವ ಹೇಳಿಕೆಗಳ ಪರಿಣಾಮ ಪ್ರಚೋದನೆಗೊಳಗಾಗಿ ತರಾತುರಿಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬೇಡಿ ಎಂದು ಸಿಎಂ ಓಂ ಪ್ರಕಾಶ್ ಅವರಿಗೆ ಸೂಚನೆ ನೀಡಿದ್ದಾರೆ. 
 
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸಿಎಂ, ಆ ಹೆಣ್ಣು ಮಗಳು ಇನ್ನೂ ಡಿವೈಎಸ್‌ಪಿ ಆಗಿದ್ದಾರೆ. ಆಕೆ ಹುದ್ದೆಯಲ್ಲಿ ಮುಂದುವರಿಯಬೇಕೆಂದು ಸರ್ಕಾರ ಬಯಸುತ್ತದೆ. ಶೆಣೈ ಮನವೊಲಿಸಲು ಡಿಜಿಪಿ ಓಂ ಪ್ರಕಾಶ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. 
 
ಫೇಸ್ ಬುಕ್ ಪುಟದಲ್ಲಿ ಸರ್ಕಾರದ ವಿರುದ್ಧ ಬರೆಯುತ್ತಿರುವ ಅನುಪಮಾ ಶೆಣೈ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. 
 
ಕಳೆದ ನಾಲ್ಕ ನಾಲ್ಕು ದಿನಗಳ ಹಿಂದೆ ಏಕಾಏಕಿ ರಾಜೀನಾಮೆ ನೀಡಿ ಕಚೇರಿಯಿಂದ ತೆರಳಿರುವ ಶೆಣೈ ಆ ಬಳಿಕ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಆದರೆ ಅವರದೆನ್ನಲಾದ ಫೇಸ್‌ಬುಕ್‌ನಲ್ಲಿ ಆಡಳಿತದ ವಿರುದ್ಧ ಸಮರವನ್ನೇ ಸಾರಲಾಗಿದೆ. ವಿಶೇಷವಾಗಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅನುಪಮಾ ಹೆಚ್ಚಿನ ಸ್ಟೇಟಸ್ ಹಾಕಿದ್ದಾರೆ. 
 
ಅನುಪಮಾ ಅವರು ಮಾಡಿರುವ ಆರೋಪಗಳ ವಿರುದ್ಧ ಸಿಎಂ ಪರಮೇಶ್ವರ ನಾಯ್ಕ್ ಅವರ ಬಳಿ ಸ್ಪಷ್ಟನೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments