Select Your Language

Notifications

webdunia
webdunia
webdunia
webdunia

10 ವರ್ಷಗಳಿಂದ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆ

ಪ್ರಶ್ನೆ ಪತ್ರಿಕೆ ಸೋರಿಕೆ
ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿರುವ ಸಿಐಡಿ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಮತ್ತು ಎಡಿಜಿಪಿ ಪ್ರತಾಪ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದರು. 
 
ಡಿಜಿಪಿ ಕಿಶೋರ್ ಚಂದ್ರ ನೀಡಿರುವ ಮಾಹಿತಿಗಳು ಈ ಮುಂದಿನಂತಿವೆ:

*ಆರೋಪಿಗಳಲ್ಲಿ ಕೆಲವರು ಹತ್ತು ವರ್ಷದಿಂದ ಲೀಕ್ ದಂಧೆಯಲ್ಲಿದ್ದಾರೆ.
 
*ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
 
* ಪ್ರಕರಣದ ಕಿಂಗ್ ಪಿನ್ ಶಿವಕುಮಾರ್ ತಲೆ ಮರೆಸಿಕೊಂಡಿರುವುರಿಂದ ಆತನನ್ನು ಇದುವರೆಗೂ ಬಂಧಿಸಲಾಗಿಲ್ಲ. ಆತನಿಗಾಗಿ ಶೋಧ ಮುಂದುವರೆದಿದೆ. ಆರೋಪಿಗಳು ಹಲವು ವರ್ಷಗಳಿಂದ ಈ ಕೃತ್ಯದಲ್ಲಿ ತೊಡಗಿದ್ದರು.
 
*ಆರೋಪಿಗಳಿಗೆ 1 ವರ್ಷ ನಿರೀಕ್ಷಣಾ ಜಾಮೀನು ಸಿಗುವುದಿಲ್ಲ.
 
*ಆರೋಪಿಗಳ ಸ್ವತ್ತು ಮುಟ್ಟುಗೋಲಿಗೆ ಸರ್ಕಾರಕ್ಕೆ ಅವಕಾಶ
 
*ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ
 
*ಲೀಕ್ ಆರೋಪಿಗಳ ವಿರುದ್ಧ ಕೋಕಾ ಕಾಯಿದೆಯಡಿ ಪ್ರಕರಣ ದಾಖಲು
 
*ಇದೇ ಮೊದಲ ಬಾರಿಗೆ ಕೋಕಾ ಅಡಿಯಲ್ಲಿ ಕೇಸ್ ದಾಖಲಿಸಿರುವ ಸಿಐಡಿ

Share this Story:

Follow Webdunia kannada