Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ಕಾದು ಕೂತಿದ್ದಾರೆ: ಆರ್.ಅಶೋಕ್

R Ashok

Krishnaveni K

ಬೆಂಗಳೂರು , ಶನಿವಾರ, 23 ಮಾರ್ಚ್ 2024 (14:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಪಟ್ಟ ಅಲುಗಾಡಿಸಲು ಅವರ ಪಕ್ಷದಲ್ಲೇ ಕೆಲವು ನಾಯಕರು ಕಾದು ಕುಳಿತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯಗಾರದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಅವರ ಪಕ್ಷದ ನಾಯಕರೇ ಕಾದು ಕುಳಿತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಕಾಂಗ್ರೆಸ್ ಸ್ಥಿತಿಗತಿಯ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ರಾಜ್ಯದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಎಂದು ಬಹಳಷ್ಟು ಮಂದಿ ಇದ್ದಾರೆ. ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಅವರ ಪಕ್ಷದೊಳಗೇ ಮಸಲತ್ತು ಮಾಡುತ್ತಿದ್ದಾರೆ ಎಂದಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಜನ ಸ್ಥಿರ ಸರ್ಕಾರವನ್ನು ನೋಡಲು ಬಯಸಿದ್ದಾರೆ. ಕಿಚಡಿ ಸರ್ಕಾರಗಳೆಲ್ಲಾ ಈ ಹಿಂದೆ ಬಂದು ಪಚಡಿ ಆಗಿ ಹೋಗಿವೆ. ಸುಭದ್ರ ಸರ್ಕಾರ ನೀಡುವ ಸಾಮರ್ಥ್ಯವಿರುವುದು ನರೇಂದ್ರ ಮೋದಿಯವರಿಗೆ ಮಾತ್ರ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಜೆಡಿಎಸ್ ಗೆ ಎಂದ ಬಿಜೆಪಿ ಉಸ್ತುವಾರಿ: ಸುಮಲತಾ ಸೈಲೆಂಟ್ ಆಗಿರಲು ಸಾಧ್ಯವೇ