ಸಿದ್ದರಾಮಯ್ಯ ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ಕಾದು ಕೂತಿದ್ದಾರೆ: ಆರ್.ಅಶೋಕ್

Krishnaveni K
ಶನಿವಾರ, 23 ಮಾರ್ಚ್ 2024 (14:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಪಟ್ಟ ಅಲುಗಾಡಿಸಲು ಅವರ ಪಕ್ಷದಲ್ಲೇ ಕೆಲವು ನಾಯಕರು ಕಾದು ಕುಳಿತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯಗಾರದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಅವರ ಪಕ್ಷದ ನಾಯಕರೇ ಕಾದು ಕುಳಿತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಕಾಂಗ್ರೆಸ್ ಸ್ಥಿತಿಗತಿಯ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ರಾಜ್ಯದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಎಂದು ಬಹಳಷ್ಟು ಮಂದಿ ಇದ್ದಾರೆ. ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಅವರ ಪಕ್ಷದೊಳಗೇ ಮಸಲತ್ತು ಮಾಡುತ್ತಿದ್ದಾರೆ ಎಂದಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಜನ ಸ್ಥಿರ ಸರ್ಕಾರವನ್ನು ನೋಡಲು ಬಯಸಿದ್ದಾರೆ. ಕಿಚಡಿ ಸರ್ಕಾರಗಳೆಲ್ಲಾ ಈ ಹಿಂದೆ ಬಂದು ಪಚಡಿ ಆಗಿ ಹೋಗಿವೆ. ಸುಭದ್ರ ಸರ್ಕಾರ ನೀಡುವ ಸಾಮರ್ಥ್ಯವಿರುವುದು ನರೇಂದ್ರ ಮೋದಿಯವರಿಗೆ ಮಾತ್ರ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಮುಂದಿನ ಸುದ್ದಿ
Show comments