Webdunia - Bharat's app for daily news and videos

Install App

ಅಗ್ನಿವೀರ್ ವಿಚಾರದಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿಗೆ ತಿವಿದ ರಾಹುಲ್ ಗಾಂಧಿ

Krishnaveni K
ಶನಿವಾರ, 6 ಜುಲೈ 2024 (10:30 IST)
ನವದೆಹಲಿ: ಅಗ್ನಿವೀರ್ ಅಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ ನೀಡಿದ ವಿಚಾರದಲ್ಲಿ ಮತ್ತೆ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ವಿಮೆ ಹಣ ಮತ್ತು ಪರಿಹಾರ ಹಣಕ್ಕೆ ವ್ಯತ್ಯಾಸವಿದೆ ಎಂದಿದ್ದಾರೆ.

ರಾಹುಲ್ ಗಾಂಧಿ ಈಗಾಗಲೇ ಅಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ ಹಣ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಭಾರತೀಯ ಸೇನೆ ಸ್ಪಷ್ಟನೆ ನೀಡಿತ್ತು. ಅಜಯ್ ಕುಮಾರ್ ಕುಟಂಬಕ್ಕೆ 98 ಲಕ್ಷ ರೂ. ಪರಿಹಾರ ನೀಡಲಾಗಿದೆ. ಉಳಿದ ಹಣವನ್ನು ಹಣ ಮತ್ತು ಇತರೆ ಸೌಲಭ್ಯಗಳ ರೂಪದಲ್ಲಿ ನೀಡಲಾಗುವುದು ಎಂದಿತ್ತು. ಆ ಮೂಲಕ ರಾಹುಲ್ ವಾದ ಸುಳ್ಳು ಎಂದಿತ್ತು.

ಆದರೆ ಈಗ ರಾಹುಲ್ ಮತ್ತೆ ತಮ್ಮ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ. ಪರಿಹಾರ ಹಣಕ್ಕೂ ವಿಮೆ ಹಣಕ್ಕೂ ವ್ಯತ್ಯಾಸವಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಅಜಯ್ ಕುಟುಂಬಕ್ಕೆ ಸಿಕ್ಕಿರುವುದು ವಿಮೆ ಹಣವಷ್ಟೇ ಹೊರತು ಪರಿಹಾರ ಹಣವಲ್ಲ ಎಂದು ಪ್ರತಿಪಾದಿಸಿದ್ದಾರೆ.

‘ಹುತಾತ್ಮ ಅಜಯ್ ಕುಮಾರ್ ಕುಟುಂಬಕ್ಕೆ ಇದುವರೆಗೆ ಸರ್ಕಾರದ ವತಿಯಿಂದ ಪರಿಹಾರ ಹಣ ಸಿಕ್ಕಿಲ್ಲ. ಪರಿಹಾರ ಹಣ ಮತ್ತು ವಿಮೆ ಹಣಕ್ಕೆ ವ್ಯತ್ಯಾಸವಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಜಯ್ ಕುಟುಂಬಕ್ಕೆ ಗೌರವ ಸಲ್ಲಿಸಬೇಕಿತ್ತು. ಆದರೆ ಪ್ರಧಾನಿ ಮೋದಿ ಸರ್ಕಾರ ಅದನ್ನು ಮಾಡಿಲ್ಲ. ಸರ್ಕಾರ ಏನೇ ಹೇಳಲಿ, ಇದು ರಾಷ್ಟ್ರೀಯ ರಕ್ಷಣೆಯ ವಿಷಯ. ಅದನ್ನು ನಾನು ಪದೇ ಪದೇ ಪ್ರಶ್ನಿಸುತ್ತಲೇ ಇರುತ್ತೇನೆ. ಇಂಡಿಯಾ ಒಕ್ಕೂಟವನ್ನು ದುರ್ಬಲಗೊಳಿಸಲು ಬಿಡಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments