Webdunia - Bharat's app for daily news and videos

Install App

ರಾಹುಲ್ ಗಾಂಧಿಗೇ ಕೈ ಕೊಟ್ಟ ಆಪ್ತ

Webdunia
ಶನಿವಾರ, 19 ಆಗಸ್ಟ್ 2017 (11:24 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪರಮಾಪ್ತ ಎನಿಸಿಕೊಂಡಿದ್ದ ಅಖಿಲೇಶ್ ಕುಲಕರ್ಣಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯತ್ವ ತ್ಯಜಿಸಿದ್ದು, ಪಕ್ಷದಿಂದಲೇ ಹೊರಬಂದಿದ್ದಾರೆ.

 
ರಾಹುಲ್ ಗಾಂಧಿಯ ಚುನಾವಣಾ ವ್ಯವಸ್ಥಾಪಕ ಮತ್ತು ಅತಿ ಆಪ್ತ ಎನಿಸಿಕೊಂಡಿದ್ದ ಅಖಿಲೇಶ್ ರಾಜೀನಾಮೆ ನಿಜಕ್ಕೂ ಕಾಂಗ್ರೆಸ್ ಗೆ ಇರಿಸುಮುರಿಸಿನಂತಾಗಿದೆ. ಅಷ್ಟೇ ಅಲ್ಲದೆ, ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಈಗ ಸ್ವಜನ ಪಕ್ಷಪಾತ ಮತ್ತು ಊಳಿಗ ಪದ್ಧತಿಯ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

‘ಪಕ್ಷ ಇಡೀ ಸಂಘಟನೆಯ ವಿಚಾರದಲ್ಲಿ ವಿಫಲವಾಗಿದೆ. ಇದರಿಂದ ಅನಗತ್ಯ ವಿವಾದ, ಕಾನೂನು ಹೋರಾಟಗಳಿಗೆ ಕಾರಣವಾಗುತ್ತಿದೆ. ಪರಿಣಾಮ ಸಾಲು ಸಾಲು ಸೋಲಾಗುತ್ತಿದೆ. ಅಲ್ಲದೆ ಪಕ್ಷ ಇತ್ತೀಚೆಗೆ ತನ್ನ ಘನತೆ ಕಳೆದುಕೊಳ್ಳುತ್ತಿದೆ, ಹಿಂದೂ ವಿರೋಧಿ ಎಂಬ ಹಣೆಪಟ್ಟಿ ಹೊತ್ತುಕೊಳ್ಳುತ್ತಿದೆ’ ಎಂದು ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ.. ಎಸಿಬಿ ವಿಚಾರಣೆಗೆ ಸಮಯ ಕೊಡಿ ಎಂದ ಯಡಿಯೂರಪ್ಪ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments