ನಮಗೂ ಒಬ್ಬ ಗೆಳೆಯ ಬೇಕು ಎನ್ನುತ್ತಿರುವ ರಾಹುಲ್ ಗಾಂಧಿ ಆಂಡ್ ಪಾರ್ಟಿ

Krishnaveni K
ಬುಧವಾರ, 5 ಜೂನ್ 2024 (09:50 IST)
ನವದೆಹಲಿ: ಎನ್ ಡಿಎ ಜೊತೆಗೆ ಕಾಂಗ್ರೆಸ್ ಕೂಡಾ ತನ್ನ ಮಿತ್ರ ಪಕ್ಷಗಳ ಸಹಾಯದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಗಳ ಬಗ್ಗೆ ಇಂದು ಸಭೆ ನಡೆಸಿ ಚರ್ಚೆ ಮಾಡಲಿದೆ. ಇದಕ್ಕಾಗಿ ಕಾಂಗ್ರೆಸ್ ಗೆ ಬಿಜೆಪಿಗಿಂತ ಹೆಚ್ಚು ಸಂಖ್ಯೆಯಲ್ಲಿ ಅನ್ಯಪಕ್ಷಗಳ ಸಹಾಯ ಬೇಕಾಗಿದೆ.

ಇಂಡಿಯಾ ಒಕ್ಕೂಟ ಒಟ್ಟು 233 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಇದೀಗ ಬಹುಮತ ಸಾಧಿಸಲು ಇಂಡಿಯಾ ಒಕ್ಕೂಟಕ್ಕೆ 40 ಸ್ಥಾನಗಳ ಕೊರತೆಯಿದೆ. ಇದಕ್ಕಾಗಿ ಈಗ ಎನ್ ಡಿಎ ಜೊತೆಗಿರುವ ಪಕ್ಷಗಳನ್ನು ಸೆಳೆಯಲು ಪ್ರಯತ್ನ ನಡೆಸಿದೆ.

ನಿತೀಶ್ ಕುಮಾರ್ ಈ ಮೊದಲು ಇಂಡಿಯಾ ಒಕ್ಕೂಟದಲ್ಲಿದ್ದರು. ಆದರೆ ಸೀಟು ಹಂಚಿಕೆ ಅಸಮಾಧಾನದಿಂದಾಗಿ ಇಂಡಿಯಾ ಬಿಟ್ಟು ಎನ್ ಡಿಎ ಸೇರಿಕೊಂಡರು. ಇತ್ತ ಚಂದ್ರ ಬಾಬು ನಾಯ್ಡು ಅವರನ್ನು ಸಂಪರ್ಕಿಸಲೂ ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಒಂದು ವೇಳೆ ಈ ಎರಡೂ ಪಕ್ಷಗಳು ಬೆಂಬಲ ಸೂಚಿಸಿದರೂ ಇಂಡಿಯಾ ಒಕ್ಕೂಟಕ್ಕೆ ಬಹುಮತ ಸಿಗಲ್ಲ. ಇದಕ್ಕಾಗಿ ಇತರೆ ಸದಸ್ಯರ ನೆರವು ಪಡೆಯಬೇಕಾಗುತ್ತದೆ.  ಹೀಗಾಗಿ ಕಾಂಗ್ರೆಸ್ ಗೆ ಸರ್ಕಾರ ರಚನೆ ಕಷ್ಟವಾದರೂ ಅಸಾಧ್ಯವೇನೂ ಅಲ್ಲ ಎನ್ನಬಹುದು.  ಈ ಬಗ್ಗೆ ಇಂದು ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments