Webdunia - Bharat's app for daily news and videos

Install App

ನನ್ನ ಭಾಷಣ ನಿಮಗೆ ಇಷ್ಟವಾಯ್ತಾ ಎಂದು ಪತ್ರಕರ್ತರನ್ನು ಕೇಳಿದ ರಾಹುಲ್ ಗಾಂಧಿ

Krishnaveni K
ಮಂಗಳವಾರ, 2 ಜುಲೈ 2024 (09:58 IST)
ನವದೆಹಲಿ: ನಿನ್ನೆ ಸಂಸತ್ ನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಾಡಲು ಅವಕಾಶ ಸಿಕ್ಕಾಗ ಮೊದಲ ಬಾರಿಗೆ ವಿಪಕ್ಷ ನಾಯಕನಾದ ಮೇಲೆ ಭಾಷಣ ಮಾಡಿದ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಜೊತೆಗೆ ಹಿಂದೂಗಳ ಬಗ್ಗೆಯೂ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಹಿಂದೂಗಳು ಎಂದು ಹೇಳಿಕೊಂಡು ತಿರುಗಾಡುವವರು ಹಿಂಸಾಚಾರ, ಭಯ ಹುಟ್ಟಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ನೀವು ನಿಜವಾದ ಹಿಂದೂಗಳೇ ಅಲ್ಲ ಎಂದು ಬಿಜೆಪಿ ಸಂಸದರಿಗೆ ಟಾಂಗ್ ಕೊಟ್ಟಿದ್ದರು. ಅಲ್ಲದೆ, ಸಂಸತ್ ನಲ್ಲಿ ಶಿವ, ಜೀಸಸ್, ಗುರು ನಾನಕ್, ಅಲ್ಲಾ ಫೋಟೋಗಳನ್ನು ಪ್ರದರ್ಶಿಸಿದ್ದರು.

ಅವರ ಈ ಭಾಷಣದ ಬಗ್ಗೆ ಸಾಕಷ್ಟು ವಿವಾದಗಳಾಗಿವೆ. ಸಂಸತ್ ನಲ್ಲಿ ಭಿತ್ತಿಪತ್ರ ಪ್ರದರ್ಶಿಸುವುದು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಅಲ್ಲದೆ, ರಾಹುಲ್ ತಮ್ಮ ಭಾಷಣದಲ್ಲಿ ಹಿಂದೂಗಳ ಬಗ್ಗೆ ನೀಡಿರುವ ಹೇಳಿಕೆಯನ್ನು ಕಡತದಿಂದ ತೆಗೆದು ಹಾಕುವಂತೆ ಬಿಜೆಪಿ ಆಗ್ರಹಿಸಿದೆ.

ಈ ವಿವಾದಿತ ಭಾಷಣದ ಬಗ್ಗೆ ಪಾರ್ಲಿಮೆಂಟ್ ಸೆಷನ್ ಮುಗಿಸಿಕೊಂಡು ಮರಳುವಾಗ ರಾಹುಲ್ ಗಾಂಧಿ ಪತ್ರಕರ್ತರ ಬಳಿ ಕೇಳಿದ್ದಾರೆ. ನಿಮಗೆ ಈವತ್ತು ನನ್ನ ಭಾಷಣ ಇಷ್ಟವಾಯಿತೇ ಎಂದು ರಾಹುಲ್ ಪತ್ರಕರ್ತರನ್ನು ಕೇಳಿದ್ದಾರೆ. ಇಂದು ರಾಹುಲ್ ಭಾಷಣಕ್ಕೆ ಪ್ರಧಾನಿ ಮೋದಿ ಪ್ರತ್ಯುತ್ತರ ನೀಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments