Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಮೇಲೆ ಹಲ್ಲೆ ಪ್ರಕರಣ; ರಾಹುಲ್ ಪರ ಬ್ಯಾಟ್ ಬೀಸಿದ ಹೆಚ್.ಡಿಡಿ

ನವದೆಹಲಿ
ನವದೆಹಲಿ , ಶುಕ್ರವಾರ, 2 ಅಕ್ಟೋಬರ್ 2020 (10:38 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಪೊಲೀಸರು ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಹುಲ್ ಗಾಂಧಿಯ ಪರ ಬ್ಯಾಟ್ ಬೀಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಮಾನಭಂಗಕ್ಕೆ ಒಳಗಾದ ಯುವತಿಯ ಮನೆಗೆ ಭೇಟಿ ನೀಡಲು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ  ತೆರಳುತ್ತಿದ್ದಾಗ, ಪೊಲೀಸರು ಅವರನ್ನು ತಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಕಾಂಗ್ರೆಸ್ ನಾಯಕರಿಗೆ ಹುಷಾರು ಎಂದು ಯುಪಿ ಸರ್ಕಾರಕ್ಕೆ ತಾಕೀತು ಮಾಡುವುದರ ಮೂಲಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಒಂದು ಹಕ್ಕು. ನ್ಯಾಯಕ್ಕಾಗಿ ರಾಹುಲ್ ಗಾಂಧಿ ಹೋರಾಟ ಮಾಡಿದ್ದಾರೆ ಎಂದು  ಟ್ವೀಟ್ ಮೂಲಕ ಬೆಂಬಲ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ ಸ್ಟಾಗ್ರಾಂನಲ್ಲಿ ಫಾಲೋ ಮಾಡುತ್ತಿದ್ದ ಹುಡುಗ ವಿದ್ಯಾರ್ಥಿನಿ ಬಳಿ ಇಂತಹ ಬೇಡಿಕೆ ಇಡೋದಾ?