Webdunia - Bharat's app for daily news and videos

Install App

ಅಗತ್ಯ ವಸ್ತುಗಳ ದರ ಏರಿಕೆ: ಪ್ರಧಾನಿ ಮೋದಿ ಮೌನ ಯಾಕೆ ಎಂದ ರಾಹುಲ್ ಗಾಂಧಿ

Webdunia
ಗುರುವಾರ, 28 ಜುಲೈ 2016 (16:19 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅಗತ್ಯ ವಸ್ತುಗಳ ದರ ಏರಿಕೆ ಕುರಿತಂತೆ ಲೋಕಸಭೆಯಲ್ಲಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಮೋದಿ ಸರಕಾರ ಎರಡು ವರ್ಷಗಳ ಹಿಂದೆ ಅಗತ್ಯ ವಸ್ತುಗಳ ದರ ಇಳಿಕೆಗೊಳಿಸುವುದಾಗಿ ಭರವಸೆ ನೀಡಿತ್ತು. ದೇಶದ ಜನತೆಗೆ ನೀಡಿದ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.
 
ಕಳೆದ 2013ರಲ್ಲಿ ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ದರ ಏರಿಕೆ ನಿಯಂತ್ರಿಸಲಾಗುವುದು. ಆದರೆ, ದರ ಏರಿಕೆ ನಿಯಂತ್ರಿಸುವ ಕುರಿತಂತೆ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.
 
ದೇಶದ ಮಾರುಕಟ್ಟೆಗಳಲ್ಲಿ ದ್ವಿದಳ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ದರಗಳು ಗಗನಕ್ಕೇರಿವೆ. ಜನಸಾಮಾನ್ಯರು ತೀವ್ರ ತೆರೆನಾದ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ದರ ಏರಿಕೆಯಿಂದ ಜನತೆ ಕಂಗಾಲಾಗಿದ್ದರೂ ಮೋದಿ ಸರಕಾರ ಮೌನಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
 
ಹಣದುಬ್ಬರ ದರವನ್ನು ಇಳಿಕೆಗೊಳಿಸುವುದಾಗಿ ಮೋದಿ ದೇಶದ ಜನತೆಗೆ ಭರವಸೆ ನೀಡಿದ್ದರು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಎರಡು ವರ್ಷಗಳ ಅವಧಿಯನ್ನು ಸಂಭ್ರಮಿಸಲಾಗುತ್ತಿದೆ. ಆದರೆ, ಹಣದುಬ್ಬರ ಇಳಿಕೆ ಕುರಿತಂತೆ ಮೋದಿ ಮಾತನಾಡಲು ಸಿದ್ದರಿಲ್ಲ ಎಂದು ಟಾಂಗ್ ನೀಡಿದರು.
 
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ದ್ವಿದಳ ಧಾನ್ಯಗಳ ದರ ಯಾವಾಗ ಇಳಿಕೆಯಾಗುತ್ತದೆ ಎನ್ನುವುದನ್ನು ಮೋದಿ ಸರಕಾರ ಸದನಕ್ಕೆ ತಿಳಿಸಲಿ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments