Webdunia - Bharat's app for daily news and videos

Install App

ರೈತರು ಡಿಜಿಟಲ್ ಪಾವತಿ ಮಾಡ್ತಾರೆಯೇ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

Webdunia
ಸೋಮವಾರ, 25 ಸೆಪ್ಟಂಬರ್ 2017 (15:32 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೋಟು ನಿಷೇಧದ ವಿರುದ್ಧ ವಾಗ್ದಾಳಿ ನಡೆಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸರಕಾರದ ತಪ್ಪುಗಳಿಂದ ಸಾಮಾನ್ಯ ಜನತೆ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ. 
ರೈತರು ಡಿಜಿಟಲ್ ಪಾವತಿ ಮಾಡುತ್ತಾರೆಯೇ? ಅವರು ಹಣವನ್ನು ಬಳಸುತ್ತಿರುವುದರಿಂದ ಬಿಜೆಪಿ ಸರಕಾರದ ನೋಟು ನಿಷೇಧದಿಂದ ದೇಶದ ಆರ್ಥಿಕತೆಯೇ ಕುಸಿಯುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಗುಜರಾತ್ ಮಾಡೆಲ್ ಅಂದರೆ, ಕಾರ್ಪೋರೇಟ್ ಕಂಪೆನಿಗಳಿಗೆ ಭೂಮಿ, ವಿದ್ಯುತ್ ಪೂರೈಕೆ ಅಗತ್ಯವಾದ ಎಲ್ಲಾ ನೆರವು ನೀಡುವುದು. ಸಾಮಾನ್ಯ ಜನತೆಯನ್ನು ಸಂಕಷ್ಟಕ್ಕೆ ತಳ್ಳುವುದಾಗಿದೆ ಎಂದು ಕಿಡಿಕಾರಿದ್ದಾರೆ. 
 
ಕಳೆದ ಎರಡು ದಶಕಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೂರು ದಿನಗಳ ಗುಜರಾತ್ ಪ್ರವಾಸ ಹಮ್ಮಿಕೊಂಡಿದ್ದು ಎರಡು ದಿನಗಳಿಗೂ ಹೆಚ್ಚು ಕಾಲ ಚುನಾವಣೆ ಪ್ರಚಾರದಲ್ಲಿ ತೊಡಗಲಿದ್ದಾರೆ. ಪಟಿದಾರ್ ಸಮುದಾಯದ ಹೃದಯಜಿಲ್ಲೆಯಾದ ಸೌರಾಷ್ಟ್ರವನ್ನು ರಾಹುಲ್ ಆಯ್ಕೆ ಮಾಡಿಕೊಂಡಿರುವುದು ವಿಶೇಷವಾಗಿದೆ.
 
ನಗರದ ಪ್ರಸಿದ್ಧ ದ್ವಾರಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ನಂತರ ಪ್ರವಾಸ ಆರಂಭಿಸಿರುವ ರಾಹುಲ್, ಮೊದಲನೇ ದಿನದಂದು ದ್ವಾರಕಾ, ಜಾಮನಗರ್, ಮೊರ್ಬಿ, ಸುರೇಂದರ್ ನಗರ್ ಮತ್ತು ರಾಜ್‌ಕೋಟ್ ಜಿಲ್ಲೆಗಳಲ್ಲಿ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments