Webdunia - Bharat's app for daily news and videos

Install App

ಇಫ್ತಾರ್ ಪಾರ್ಟಿಯಲ್ಲಿ ರಾಹುಲ್ ಗಾಂಧಿ: ಕುಂಭಮೇಳ, ರಾಮಮಂದಿರಕ್ಕೆ ಬರಲಿಲ್ಲ ಎಂದು ಟೀಕೆ (ವಿಡಿಯೋ)

Krishnaveni K
ಗುರುವಾರ, 27 ಮಾರ್ಚ್ 2025 (09:15 IST)
Photo Credit: X
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಮುಸಲ್ಮಾನ ಬಾಂಧವರ ಪ್ರಮುಖ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದಾರೆ. ಇದಕ್ಕೆ ನೆಟ್ಟಿಗರು ಟೀಕಿಸಿದ್ದು, ಕುಂಭಮೇಳ, ರಾಮಮಂದಿರಕ್ಕೆ ಯಾವತ್ತೂ ಭೇಟಿ ಕೊಟ್ಟಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಹುಲ್ ಗಾಂಧಿ ಮುಸಲ್ಮಾನ ಬಾಂಧವರೊಂದಿಗೆ ನಿನ್ನೆ ಇಫ್ತಾರ್ ಕೂಟದಲ್ಲಿ ಭಾಗಿಯಾಗಿ ಭಕ್ಷ್ಯ ಸವಿದಿದ್ದಾರೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಕೆಲವು ವರ್ಗದವರಿಂದ ನಾನಾ ರೀತಿಯ ಕಾಮೆಂಟ್ ಬಂದಿದೆ.

ಇದೇ ರಾಹುಲ್ ಗಾಂಧಿ ಈ ಹಿಂದೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನವಿತ್ತರೂ ಬರಲಿಲ್ಲ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಒಂದು ವಿಶ್ ಕೂಡಾ ಮಾಡಿಲ್ಲ. ಆದರೆ ಈಗ ಇಫ್ತಾರ್ ಕೂಟಕ್ಕೆ ಹಾಜರಾಗಿದ್ದಾರೆ. ಇದು ಸಮಾಜವಾದವೋ, ಕೋಮುವಾದವೋ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಇಮ್ರಾನ್ ಪ್ರತಾಪ್ಗರಿ ಈ ಇಫ್ತಾರ್ ಪಾರ್ಟಿಯನ್ನು ಆಯೋಜಿಸಿದ್ದರು. ರಾಹುಲ್ ಇಫ್ತಾರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ಸಮರ್ಥಿಸಿರುವ ಕಾಂಗ್ರೆಸ್ ಬೆಂಬಲಿಗರು, ಬಿಜೆಪಿಯವರು ಎಷ್ಟೇ ಉರಿದುಕೊಂಡರೂ ಈ ವ್ಯಕ್ತಿ ಮಾತ್ರ ತನ್ನ ನಿಲುವಿನಲ್ಲಿ ರಾಜಿ ಮಾಡಿಕೊಳ್ಳಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments