Webdunia - Bharat's app for daily news and videos

Install App

ಕುರುಕ್ಷೇತ್ರದಲ್ಲಿ ಅಭಿಮನ್ಯುಗೆ ಮಾಡಿದ ಹಾಗೆ ಬಿಜೆಪಿ ಯುವಕರ ಸುತ್ತ ಚಕ್ರವ್ಯೂಹ ಹಣಿಯುತ್ತಿದೆ: ರಾಹುಲ್ ಗಾಂಧಿ

Krishnaveni K
ಸೋಮವಾರ, 29 ಜುಲೈ 2024 (15:46 IST)
ನವದೆಹಲಿ: ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು ಚಕ್ರವ್ಯೂಹ ನಿರ್ಮಿಸಿದ ಹಾಗೆ ಈಗ ಬಿಜೆಪಿಯೂ ಯುವಕರ ಸುತ್ತ ಚಕ್ರವ್ಯೂಹ ಹಣಿಯುತ್ತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ಕುರುಕ್ಷೇತ್ರದಲ್ಲಿ ಸಾವಿರಾರು ವರ್ಷಗಳ ಹಿಂದೆ ಅಭಿಮನ್ಯುವನ್ನು ಮಣಿಸಲು ಚಕ್ರವ್ಯೂಹವನ್ನು ಹಣೆಯಲಾಗಿತ್ತಂತೆ. ನಾನು ಓದಿದ ಹಾಗೆ ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದೂ ಕರೆಯುತ್ತಾರೆ. ಪದ್ಮ ಎಂದರೆ ಕಮಲ. ಚಕ್ರವ್ಯೂಹವೂ ಕಮಲದಂತೆ ಇತ್ತಂತೆ. ಈಗ ಬಿಜೆಪಿಯೂ ಅದನ್ನೇ ಮಾಡುತ್ತಿದೆ.

21 ನೇ ಶತಮಾನದಲ್ಲಿ ಪ್ರಧಾನಿ ಮೋದಿ ತಮ್ಮ ಎದೆಯಲ್ಲೇ ಕಮಲದ ಚಿತ್ರ ಅಂಟಿಸಿಕೊಂಡಿದ್ದಾರೆ. ಹಿಂದೆ ಅಭಿಮನ್ಯುವಿಗೆ ಮಾಡಿದ್ದನ್ನೇ ಈಗಿನ ಬಿಜೆಪಿ ಸರ್ಕಾರ ಯುವಕರು, ಮಹಿಳೆಯರು, ಕೃಷಿಕರು, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವರ್ಗದವರೊಡನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರದ ಚಕ್ರವ್ಯೂಹವನ್ನು ಆರು ಜನ ನಿಯಂತ್ರಿಸುತ್ತಿದ್ದಾರೆ. ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ನಿಭಾಯಿಸುತ್ತಿದ್ದಾರೆ. ರಾಹುಲ್ ಅಂಬಾನಿ, ಅದಾನಿ ಹೆಸರು ಪ್ರಸ್ತಾಪಿಸಿದ್ದಕ್ಕೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪವೆತ್ತಿದರು. ಆಗ ರಾಹುಲ್, ಬೇಕಿದ್ದರೆ ನಾನು ಅಂಬಾನಿ ಮತ್ತು ಅದಾನಿ ಹೆಸರನ್ನು ಹಿಂತೆಗೆಯುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments