ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

Sampriya
ಗುರುವಾರ, 14 ಆಗಸ್ಟ್ 2025 (19:15 IST)
ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಚುನಾವಣಾ ಆಯೋಗದ "ಮತ ಕಳ್ಳತನ" ಆರೋಪಗಳ ಬಗ್ಗೆ ವಾಗ್ದಾಳಿ ನಡೆಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಸಂವಿಧಾನವನ್ನು ಓದಿಲ್ಲ ಮತ್ತು ಅದರ ಬಗ್ಗೆ ಗೌರವವು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಮಾಧ್ಯಮಗಳೊಂದಿಗೆ ಮಾತನಾಡಿದ ರಿಜಿಜು, "ರಾಹುಲ್ ಗಾಂಧಿ ಸಂವಿಧಾನವನ್ನು ಓದಿಲ್ಲ ಮತ್ತು ಅದರ ಬಗ್ಗೆ ಗೌರವವಿಲ್ಲ, ರಾಹುಲ್ ಗಾಂಧಿಯನ್ನು ಸುಧಾರಿಸಲು ನನ್ನ ಬಳಿ ಯಾವುದೇ ಔಷಧಿಗಳಿಲ್ಲ, ಸುಪ್ರೀಂ ಕೋರ್ಟ್ ಹೇಳಿಕೆಯ ನಂತರ ಅವರು ತಮ್ಮ ಬುದ್ದಿಮಾನಕ್ಕೆ ಬರಬೇಕು" ಎಂದು ಹೇಳಿದರು. 

ರಿಜಿಜು ಅವರು ಬಿಹಾರದಲ್ಲಿ ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ನ ಕಾಮೆಂಟ್ ಅನ್ನು ಉಲ್ಲೇಖಿಸುತ್ತಾ, ಚುನಾವಣಾ ಪಟ್ಟಿಗಳ ಇಸಿಯ ಪರಿಷ್ಕರಣೆಯನ್ನು ಸಮರ್ಥಿಸಿದರು ಮತ್ತು ಆಧಾರ್ ಕಾರ್ಡ್ ಪೌರತ್ವದ ನಿರ್ಣಾಯಕ ಪುರಾವೆಯಲ್ಲ ಎಂದು ಒಪ್ಪಿಕೊಂಡರು. 

"ಕಾಂಗ್ರೆಸ್‌ನಲ್ಲೂ ಕೆಲವು ಬುದ್ಧಿವಂತರಿದ್ದಾರೆ, ಅವರೆಲ್ಲರೂ ರಾಹುಲ್ ಗಾಂಧಿಯಂತಲ್ಲ, ಅವರು ಒಟ್ಟಾಗಿ ಬಂದು ರಾಹುಲ್ ಗಾಂಧಿಗೆ ಬುದ್ದಿವಂತಿಕೆ ನೀಡಬೇಕು" ಎಂದು ಅವರು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments