Webdunia - Bharat's app for daily news and videos

Install App

ಸಮಾಜವಾದಿ ಪಕ್ಷ ಒಡೆದರೆ ಅಖಿಲೇಶ್ ಜತೆ ರಾಹುಲ್ ಮೈತ್ರಿ?

Webdunia
ಗುರುವಾರ, 27 ಅಕ್ಟೋಬರ್ 2016 (16:20 IST)
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಯಾದವೀ ಕಲಹದ ಲಾಭ ಪಡೆಯಲು ಕಾಂಗ್ರೆಸ್ ಪಕ್ಷ ಕಾದು ಕುಳಿತಿರುವಂತಿದೆ. ಸಮಾಜವಾದಿ ಪಕ್ಷದಲ್ಲಿ ಎದ್ದಿರುವ ಗೊಂದಲಗಳ ಮೇಲೆ ನಿಗಾ ಇಟ್ಟಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒಂದು ವೇಳೆ ಪಕ್ಷ ಇಬ್ಭಾಗವಾದರೆ ಅಖಿಲೇಶ್ ಜತೆ ಮೈತ್ರಿ ಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. 
ಸ್ವತಃ ಕಾಂಗ್ರೆಸ್ ಮೂಲಗಳಿಂದ ಹರಿದು ಬಂದಿರುವ ಸುದ್ದಿಯ ಪ್ರಕಾರ ಅಖಿಲೇಶ್ ಜತೆಗೆ ಉತ್ತಮ ಸಂಬಂದವನ್ನು ಹೊಂದಿರುವ ರಾಹುಲ್, ಸಮಾಜವಾದಿ ಪಕ್ಷ ಒಡೆದರೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಒಲವು ಹೊಂದಿದ್ದಾರೆ. 
 
ಆದಾಗ್ಯೂ, ಮತ್ತೊಬ್ಬ  ಕಾಂಗ್ರೆಸ್ ನಾಯಕ, ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವುದು "ಯೋಜಿತ ನಾಟಕ" ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಇದಕ್ಕೆ ಜವಾಬ್ದಾರರು ಎಂದು ವ್ಯಾಖ್ಯಾನಿಸಿದ್ದಾರೆ. 
 
ಸಂಪೂರ್ಣ ನಾಟಕದ ನಿರ್ಮಾಣ, ನಿರ್ದೇಶನ ಮತ್ತು ನಟನೆ ಮುಲಾಯಂ ಸಿಂಗ್ ಅವರದ್ದು ಎಂದವರು ಹೇಳಿದ್ದಾರೆ. 
 
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಎರಡು ಬಣಗಳಾಗಿ ಒಡೆದಿದೆ. ಮುಲಾಯಂ ಸಹೋದರ ಶಿವಪಾಲ್ ಸಿಂಗ್ ಅವರದು ಒಂದು ಬಣವಾದರೆ, ಪುತ್ರ ಅಖಿಲೇಶ್ ಯಾದವ್ ಅವರದು ಇನ್ನೊಂದು ಬಣ. ಪಕ್ಷದಲ್ಲಿ ಎದ್ದಿರುವ ಗೊಂದಲವನ್ನು ಸರಿ ಪಡಿಸಲು ಶತಾಯಗತಾಯ ಯತ್ನಿಸುತ್ತಿರುವ ಮುಲಾಯಂ ಸಿಂಗ್ ಯಾದವ್ ತಮ್ಮ ತಮ್ಮ ಶಿವಪಾಲ್ ಸಿಂಗ್ ಮತ್ತು ಮಿತ್ರ ಅಮರ್ ಸಿಂಗ್ ಪರ ನಿಂತಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದೂ ಈ ಜಿಲ್ಲೆಗಳಿಗೆ ಭಾರೀ ಮಳೆ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ಮುಂದಿನ ಸುದ್ದಿ
Show comments