Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಅನಕ್ಷರಸ್ಥರಂತೆ!

ರಾಹುಲ್ ಗಾಂಧಿ ಅನಕ್ಷರಸ್ಥರಂತೆ!
ನವದೆಹಲಿ , ಭಾನುವಾರ, 27 ಆಗಸ್ಟ್ 2017 (11:35 IST)
ನವದೆಹಲಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ನೇರ ಮಾತುಗಳಿಗೆ ಹೆಸರು ವಾಸಿ. ಅವರೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಅನಕ್ಷರಸ್ಥರೆಂದಿದ್ದಾರೆ!

 
ಹರಿಯಾಣಾದ ಮಾಜಿ ಸಿಎಂ ಭೂಪಿಂದರ್ ಹೂಡಾ ಅವರು ರಾಹುಲ್ ಗಾಂಧಿಯಂತೆ ಅನಕ್ಷರಸ್ಥ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇರಾ ಮುಖ್ಯಸ್ಥನ ಬಂಧನದ ನಂತರ ಹರಿಯಾಣದಲ್ಲಿ ನಡೆದ ಹಿಂಸಾಚಾರದಲ್ಲಿ 30 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಮನೋಹರ ಲಾಲ್ ಖಟ್ಟರ್ ರಾಜೀನಾಮೆ ನೀಡಬೇಕು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೆಕು ಎಂದು  ಹೂಡಾ ಆಗ್ರಹಿಸಿದ್ದರು.

ಈ ಬಗ್ಗೆ ಅಭಿಪ್ರಾಯ ಕೇಳಿದಾಗ ಸುಬ್ರಮಣಿಯನ್ ಸ್ವಾಮಿ ಇಂತಹದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೂಡಾ ಅಧಿಕಾರ ಕಳೆದುಕೊಂಡಿದ್ದಾರೆ ಮತ್ತು ಅವರು ಅನಕ್ಷರಸ್ಥ ಅದಕ್ಕೇ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ.. ಪೋರ್ನ್ ವಿಡಿಯೋ ಪ್ರಕಟಿಸಿದ ಬಾಲಿವುಡ್ ಸ್ಟಾರ್ ವಿರುದ್ಧ ದೂರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಓಡಿಸಿ ದೇಶ ಉಳಿಸಿ: ಲಾಲು ಯಾದವ್ ಗುಡುಗು