ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

Krishnaveni K
ಶನಿವಾರ, 15 ನವೆಂಬರ್ 2025 (11:02 IST)
ಪಾಟ್ನಾ: ಬಿಹಾರ ಚುನಾವಣೆ ಫಲಿತಾಂಶ ಅಚ್ಚರಿ ತಂದಿದೆ. ಆರಂಭದಿಂದಲೂ ಇಲ್ಲಿ ಚುನಾವಣೆ ನ್ಯಾಯಸಮ್ಮತವಾಗಿ ನಡೆದಿಲ್ಲ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಎಷ್ಟು ದಿನ ಈ ನೆಪ ಹೇಳ್ತೀರಿ ಎಂದಿದ್ದಾರೆ.

ಬಿಹಾರದಲ್ಲಿ ಚುನಾವಣೆ ಸೋಲುತ್ತಿದ್ದಂತೇ ಹಲವು ಕಾಂಗ್ರೆಸ್ ನಾಯಕರು ಇದು ಮತಗಳ್ಳತನದಿಂದ ಸೋಲಾಗಿದೆ ಎಂದಿದ್ದರು. ಕರ್ನಾಟಕದ ನಾಯಕರೇ ಈ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಟ್ವೀಟ್ ಮಾಡಿ ‘ಮಹಾಮೈತ್ರಿಕೂಟದಲ್ಲಿ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಬಿಹಾರದಲ್ಲಿನ ಈ ಫಲಿತಾಂಶ ನಿಜಕ್ಕೂ ಆಘಾತಕಾರಿ. ಆರಂಭದಿಂದಲೂ ನ್ಯಾಯಯುತವಲ್ಲದ ಚುನಾವಣೆಯಲ್ಲಿ ನಾವು ಗೆಲ್ಲುವಲ್ಲಿ ವಿಫಲರಾಗಿದ್ದೇವೆ.

ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ. ಕಾಂಗ್ರೆಸ್ ಪಕ್ಷ ಮತ್ತು ಭಾರತ ಮೈತ್ರಿಕೂಟ ಈ ಫಲಿತಾಂಶವನ್ನು ಆಳವಾಗಿ ಪರಿಶೀಲಿಸುತ್ತವೆ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತವೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಪ್ರತೀ ಬಾರಿ ಇದೇ ಮಾತು ಹೇಳ್ತಿದ್ದೀರಾ, ನಿಮ್ಮ ಸೋಲಿಗೆ ನೆಪಗಳನ್ನು ಹುಡುಕುತ್ತಾ ಕೂರುತ್ತಿದ್ದೀರಿ. ನಿಮ್ಮ ನಾಯಕತ್ವವೂ ವಿಫಲವಾಗಿದೆ ಎಂದು ಒಪ್ಪಿಕೊಳ್ಳೋದು ಯಾವಾಗ ಎಂದು ಪ್ರಶ್ನಿಸಿದ್ದಾರೆ. ಇದೇ ರೀತಿ ವಿದೇಶದಲ್ಲಿ ಕುಳಿತುಕೊಂಡು ಟ್ವೀಟ್ ಮಾಡುತ್ತಿದ್ದರೆ ಏನು ಪ್ರಯೋಜನ ಎಂದಿದ್ದಾರೆ. ಮತ್ತೆ ಕೆಲವರು ವೋಟ್ ಚೋರಿ, ಸಂವಿಧಾನ ಎಂದು ಹೇಳುತ್ತಿದ್ದರೆ ಮುಂದಿನ ಚುನಾವಣೆಯಲ್ಲೂ ಇದೇ ಕತೆ ಗ್ಯಾರಂಟಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments