Select Your Language

Notifications

webdunia
webdunia
webdunia
webdunia

ಸಿಎಂ ಹಿಮಾಂತ ಬಿಸ್ವಾ ಅತ್ಯಂತ ಭ್ರಷ್ಟ: ರಾಹುಲ್ ಗಾಂಧಿ

ಸಿಎಂ ಹಿಮಾಂತ ಬಿಸ್ವಾ ಅತ್ಯಂತ ಭ್ರಷ್ಟ: ರಾಹುಲ್ ಗಾಂಧಿ

Krishnaveni K

ಅಸ್ಸಾಂ , ಬುಧವಾರ, 24 ಜನವರಿ 2024 (13:27 IST)
ಅಸ್ಸಾಂ: ಸಿಎಂ ಹಿಮಾಂತ ಬಿಸ್ವಾಸ್ ಅತ್ಯಂತ ಭ್ರಷ್ಠ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಅಸ್ಸಾಂನಲ್ಲಿ ಭಾರತ್ ನ್ಯಾಯ್ ಜೋಡೋ ಯಾತ್ರೆಯ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮತ್ತೊಮ್ಮೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾರನ್ನು ಅತ್ಯಂತ ಭ್ರಷ್ಟ ಸಿಎಂ ಎಂದಿದ್ದಾರೆ.

ಈ ಮೊದಲು ರಾಹುಲ್ ಇದೇ ರೀತಿ ವಾಗ್ದಾಳಿ ನಡೆಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಂಗಡಿಗರ ಮೇಲೆ ಹಿಂಸಾಚಾರಕ್ಕೆ ಪ್ರಚೋದನೆ ಆರೋಪದಲ್ಲಿ ಕೇಸ್ ದಾಖಲಾದ ಬೆನ್ನಲ್ಲೇ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ಮುಖ್ಯಮಂತ್ರಿಗಳು ಎಲ್ಲೆಡೆ ಧ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಜನರ ಜಮೀನನ್ನು ಬಲವಂತವಾಗಿ ಕಿತ್ತುಕೊಳ್ಳುತ್ತಿದ್ದಾರೆ. ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಲಲ್ಲಾನ ನೋಡಲು ಅಯೋಧ್ಯೆ ರಾಮಮಂದಿರಕ್ಕೆ ಬಂದ ಹನುಮ