Webdunia - Bharat's app for daily news and videos

Install App

ಕೆಸರು ನೋಡಿ ಕಾರಿನಿಂದ ಇಳಿಯದ ಮೇಲೆ ಇಲ್ಲಿಗೆ ಬಂದಿದ್ಯಾಕೆ: ರಾಹುಲ್ ಗಾಂಧಿಗೆ ವಯನಾಡು ಸ್ಥಳೀಯರ ಆಕ್ರೋಶ

Krishnaveni K
ಸೋಮವಾರ, 5 ಆಗಸ್ಟ್ 2024 (08:47 IST)
ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ್ದ ಭೀಕರ ಗುಡ್ಡ ಕುಸಿತ ದರುಂತ ದೇಶವೇ ತಲ್ಲಣಗೊಳಿಸುವಂತೆ ಮಾಡಿತ್ತು. ಮೊನ್ನೆಯಷ್ಟೇ ಅಲ್ಲಿನ ಸಂಸದ ರಾಹುಲ್ ಗಾಂಧಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.  ಈ ವೇಳೆ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕ ಜೊತೆ ವಯನಾಡಿನ ದುರಂತ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ರೈನ್ ಕೋಟ್, ಗಮ್ ಬೂಟ್ ಹಾಕಿಕೊಂಡು ದುರಂತ ಸ್ಥಳವನ್ನು ವೀಕ್ಷಿಸಿದ್ದರು. ಆದರೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಒಂದು ಕಡೆ ರಾಹುಲ್ ಕೆಸರು ಇದೆ ಎಂಬ ಕಾರಣಕ್ಕೆ ಕಾರಿನಿಂದ ಇಳಿಯಲು ನಿರಾಕರಿಸುತ್ತಾರೆ.

ಆಗ ಸ್ಥಳದಲ್ಲಿದ್ದ ಸ್ಥಳೀಯ ಯುವಕನೊಬ್ಬ ಕಾರಿನಿಂದ ಕೆಳಗಿಳಿಯುವಂತೆ ಆಗ್ರಹಿಸುತ್ತಾನೆ. ಆದರೆ ರಾಹುಲ್ ಇದಕ್ಕೆ ಕಿವಿಯೇ ಕೊಡದೆ ಕಾರಿನಲ್ಲೇ ಕೂತಿರುತ್ತಾರೆ. ಅವರ ಚಾಲಕ ಯವಕನೆಡೆ ಕೈ ತೋರಿಸಿ ಮುಂದೆ ನಡೆಯವಂತೆ ಸೂಚಿಸುತ್ತಾರೆ. ಈ ಮಧ್ಯೆ ಪೊಲೀಸರು ಯುವಕನನ್ನು ಇತ್ತ ಕರೆದೊಯ್ದು ಸಮಾಧಾನಿಸುವ ಪ್ರಯತ್ನ ಮಾಡುತ್ತಾರೆ.

ಆಗ ಕೆಲವು ಸ್ಥಳೀಯರೂ ಯುವಕನಿಗೆ ಸಾಥ್ ನೀಡುತ್ತಾರೆ. ಈ ವೇಳೆ ಯುವಕ ನಮ್ಮ ಕಷ್ಟ ಕೇಳಲು ಇಲ್ಲಿಗೆ ಬಂದು ಕೆಳಗಿಳಿಯಲ್ಲ ಎಂದರೆ ಇಲ್ಲಿನ  ಸಂಸದರಾಗಿದ್ದು ಯಾಕೆ? ನಮ್ಮ ಸಮಸ್ಯೆಗಳನ್ನು ನೋಡಲು ಅವರು ಕೆಳಗಿಳಿದು ಬರಬೇಕಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಹಾಗಿದ್ದರೂ ರಾಹುಲ್ ಇದಕ್ಕೆ ತಲೆಯೇ ಕೆಡಿಸಿಕೊಳ್ಳದೇ ಮುಂದೆ ಸಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments