Webdunia - Bharat's app for daily news and videos

Install App

ಬಾಲಸೋರ್ ಘಟನೆ ಬಳಿಕವೂ ಬುದ್ಧಿ ಬಂದಿಲ್ವಾ ನಿಮಗೆ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಚಾಟಿ

Krishnaveni K
ಶನಿವಾರ, 12 ಅಕ್ಟೋಬರ್ 2024 (13:24 IST)
ನವದಹಲಿ: ಮೈಸೂರು-ದರ್ಭಾಂಗ ನಡುವಿನ ಎಕ್ಸ್ ಪ್ರೆಸ್ ರೈಲು ಅಪಘಾತದ ಬಳಿಕ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಾಲಸೋರ್ ಘಟನೆ ಬಳಿಕವೂ ನಿಮಗೆ ಬುದ್ಧಿ ಬಂದಿಲ್ವಾ ಎಂದು ಕಿಡಿ ಕಾರಿದ್ದಾರೆ.

ಬಾಲಸೋರ್ ನಲ್ಲಿ ಈ ಮೊದಲು ರೈಲು ಅಪಘಾತ ಸಂಭವಿಸಿತ್ತು . ಮೈಸೂರು-ದರ್ಭಾಂಗ ಎಕ್ಸ್ ಪ್ರೆಸ್ ರೈಲು ಅಪಘಾತವೂ ಬಾಲಸೋರ್ ಅಪಘಾತವನ್ನೇ ಹೋಲುತ್ತದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು-ದರ್ಭಾಂಗ ಎಕ್ಸ್ ಪ್ರೆಸ್ ರೈಲು ನಿನ್ನೆ ತಮಿಳುನಾಡಿನ ತಿರುವಳ್ಳೂರು ಬಳಿ ಗೂಡ್ಸ್ ರೈಲಿಗೆ ಢಿಕ್ಕಿಯಾಗಿ ಅನಾಹುತ ಸಂಭವಿಸಿತ್ತು. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ಕಾರಣಕ್ಕೆ ರಾಹುಲ್ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ಬಾಲಸೋರ್ ಅಪಘಾತದಿಂದ ಕೇಂದ್ರ ಯಾವುದೇ ಪಾಠ ಕಲಿತಿಲ್ಲ. ಈ ಅಪಘಾತದ ಹೊಣೆ ಕೇಂದ್ರದ್ದೇ ಆಗಿರುತ್ತದೆ. ಇಂತಹ ಅಪಘಾತಗಳ ಬಗ್ಗೆ ಎಚ್ಚೆತ್ತುಕೊಳ್ಳಲು ಇನ್ನೂ ಎಷ್ಟು ಅಪಘಾತಗಳು ಸಂಭವಿಸಬೇಕು ಎಂದು ರಾಹುಲ್ ಗಾಂಧಿ ಆಕ್ರೋಶದಿಂದ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments