ಅಗ್ನಿವೀರ್ ಯೋಧನ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು ಸುಳ್ಳು

Krishnaveni K
ಗುರುವಾರ, 4 ಜುಲೈ 2024 (10:39 IST)
ನವದೆಹಲಿ: ಅಗ್ನಿವೀರ್ ಯೋಧ ಅಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸುಳ್ಳು ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಲೋಕಸಭೆಯಲ್ಲಿ ಅಗ್ನಿವೀರ್ ಯೋಜನೆ ಬಗ್ಗೆ ಟೀಕಿಸಿದ್ದ ರಾಹುಲ್ ಗಾಂಧಿ ಇದರಿಂದ ಯುವಕರ ಆತ್ಮಸ್ಥೈರ್ಯ ಕುಗ್ಗುತ್ತಿದೆ. ಇದು ಸೇನೆಯ ಯೋಜನೆಯಲ್ಲ, ಮೋದಿಯ ಯೋಜನೆ ಎಂದು ಟೀಕಿಸಿದ್ದರು. ಅಲ್ಲದೆ, ಟ್ವೀಟ್ ಮಾಡಿ ಯೋಧ ಅಜಯ್ ಕುಮಾರ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಸಿಕ್ಕಿಲ್ಲ. ಪರಿಹಾರ ನೀಡುತ್ತೇವೆ ಎಂದು ಹೇಳಿರುವುದೆಲ್ಲಾ ಸುಳ್ಳು ಎಂದು ಅಜಯ್ ಕುಟುಂಬದವರ ವಿಡಿಯೋ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.

ಆದರೆ ಇದು ಸುಳ್ಳು ಎಂದು ಸೇನೆ ಸ್ಪಷ್ಟಪಡಿಸಿದೆ. ಯೋಧ ಅಜಯ್ ಕುಮಾರ್ ಕುಟುಂಬಕ್ಕೆ 1.05 ಕೋಟಿ ರೂ. ಪರಿಹಾರ ನೀಡಲಾಗುವುದು. ಈಗಾಗಲೇ 98 ಲಕ್ಷ ರೂ. ಪಾವತಿ ಮಾಡಲಾಗಿದೆ. ಉಳಿದಂತೆ 67 ಲಕ್ಷ ರೂ. ಮೌಲ್ಯದ ಹೆಚ್ಚುವರಿ ಹಣ ಹಾಗೂ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.

1 ಕೋಟಿ ರೂ. ಪರಿಹಾರ ನೀಡುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುಳ್ಳು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಆದರೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಸುಳ್ಳು ಎಂದು ಸೇನೆಯೇ ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಿಕ್ ರೆಹಮಾನ್‌

ಸರ್ಕಾರೀ ಭೂಮಿಯಲ್ಲಿ ಕಾಂಗ್ರೆಸ್ ಭವನ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ವ್ಯಾಲೆಂಟೈನ್ಸ್ ಡೇ: ಬೆಂಗಳೂರಿನಿಂದ ಅತಿ ಹೆಚ್ಚು ಗುಲಾಬಿ ರಪ್ತು, ಹೊಸ ಮೈಲಿಗಲ್ಲು

ಅಜಿತ್ ಪವಾರ್ ಸಾವಿನ ಬಗ್ಗೆ ಸಿಡಿದೆದ್ದ ಪುತ್ರ ರೋಹಿತ್ ಪವಾರ್, ಹೇಳಿದ್ದೇನು

ಮುಡಾ ನಿವೇಶನ ಹಂಚಿಕೆ: ಪ್ರಕರಣ ಸಂಬಂಧ ಹೊಸ ಬಾಂಬ್‌ ಸಿಡಿಸಿದ ಸ್ನೇಹಮಹಿ ಕೃಷ್ಣ

ಮುಂದಿನ ಸುದ್ದಿ
Show comments