Webdunia - Bharat's app for daily news and videos

Install App

ಸಿಎಂ ಕೆಸಿಆರ್ ಕುಟುಂಬಕ್ಕಾಗಿ ತೆಲಂಗಾಣಾ ರಾಜ್ಯ ರಚನೆ ಮಾಡಿಲ್ಲ: ರಾಹುಲ್ ವಾಗ್ದಾಳಿ

Webdunia
ಶುಕ್ರವಾರ, 2 ಜೂನ್ 2017 (15:28 IST)
ತೆಲಂಗಾಣಾ ಸರಕಾರ ಉತ್ತಮ ಮಾರ್ಗದಲ್ಲಿ ಸಾಗುತ್ತಿಲ್ಲ. ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕುಟುಂಬಕ್ಕಾಗಿ ತೆಲಂಗಾಣಾ ರಾಜ್ಯ ರಚನೆ ಮಾಡಿಲ್ಲ ಎಂದು  ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ತೆಲಂಗಾಣಾ ರಾಜ್ಯ ರಚನೆಯಾಗಿ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಮಾತನಾಡಿದ ಅವರು, ತೆಲಂಗಾಣಾ ರಾಜ್ಯದ ಜನತೆಯ ಕನಸುಗಳನ್ನು ಈಡೇರಿಸಲು ರಾಜ್ಯ ರಚನೆ ಮಾಡಲಾಯಿತು. ಆದರೆ, ಜನತೆಯ ಕನಸುಗಳು ಕನಸಾಗಿಯೇ ಉಳಿದಿವೆ. ಸರಕಾರ ಜನವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕೆಸಿಆರ್ ಕುಟುಂಬದಲ್ಲಿ ಪುತ್ರ ಕೆ.ಟಿರಾಮರಾವ್ ಸಚಿವರಾಗಿದ್ದಾರೆ. ಪುತ್ರಿ ಕೆ.ಕವಿತಾ ಲೋಕಸಭೆ ಸದಸ್ಯೆಯಾಗಿದ್ದಾರೆ, ಅಳಿಯ ಹರೀಶ್ ರಾವ್ ಸಚಿವರಾಗಿದ್ದಾರೆ. ತೆಲಂಗಾಣಾದ ವಿದ್ಯಾರ್ಥಿಗಳು ಮತ್ತು ರೈತರು ಒಂದು ಕುಟುಂಬಕ್ಕಾಗಿ ಹೋರಾಟ ಮಾಡಿದರೇ ಎಂದು ಪ್ರಶ್ನಿಸಿದ್ದಾರೆ.
 
ಕೇವಲ ನಾಲ್ವರಿಗಾಗಿ ತೆಲಂಗಾಣಾ ರಾಜ್ಯ ರಚನೆ ಮಾಡಲಾಯಿತೇ? ಮುಖ್ಯಮಂತ್ರಿ ಕೆಸಿಆರ್, ತಮ್ಮೊಂದಿಗೆ ವಿದ್ಯಾರ್ಥಿಗಳು, ಯುವಕರು, ರೈತರು, ಮಹಿಳೆಯರು ಮತ್ತು ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಶ್ರಮಿಸಿದೇ, ಕೇವಲ ಗುತ್ತಿಗೆದಾರರು ಭೂ ಮಾಫಿಯಾದವರ ಲಾಭಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments