ರಾಹುಲ್ ಗಾಂಧಿಗೆ ಈಗ ಎಸ್ ಸಿ/ಎಸ್ ಟಿಯೇ ಅಸ್ತ್ರ

Krishnaveni K
ಮಂಗಳವಾರ, 20 ಫೆಬ್ರವರಿ 2024 (10:34 IST)
Photo Courtesy: Twitter
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲು ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ರಾಹುಲ್ ಗಾಂಧಿ ಈಗ ಎಸ್ ಸಿ/ಎಸ್ ಟಿ ವರ್ಗದವರಿಗೆ ಅನ್ಯಾಯವಾಗುತ್ತಿದೆ ಎಂಬ ವಿಚಾರವನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ರಾಹುಲ್ ಎಲ್ಲೇ ಹೋದರೂ ಕೇಂದ್ರ ಸರ್ಕಾರ ಹಿಂದಳಿದ ವರ್ಗದವರನ್ನು ಕಡೆಗಣಿಸುತ್ತಿದೆ ಎಂಬ ವಿಚಾರವನ್ನೇ ಒತ್ತಿ ಒತ್ತಿ ಹೇಳುತ್ತಿದ್ದಾರೆ. ಭಾರತ್ ನ್ಯಾಯ್ ಜೋಡೋ ಯಾತ್ರೆಯಲ್ಲಿ ಎಲ್ಲೇ ಸಮಾವೇಶದಲ್ಲಿ ಮಾತನಾಡುವುದಿದ್ದರೂ ರಾಹುಲ್ ಭಾಷಣದಲ್ಲಿ ಈ ವಿಚಾರ ಬಂದೇ ಬರುತ್ತಿದೆ.

 ಆ ಮೂಲಕ ಈ ವರ್ಗದವರನ್ನೇ ಅವರು ಟಾರ್ಗೆಟ್ ಮಾಡಿಕೊಂಡಿರುವುದು ಪಕ್ಕಾ ಆಗಿದೆ. ಉತ್ತರ ಪ್ರದೇಶದಲ್ಲಿ ನಡೆದ ಸಮಾವೇಶದಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ, ದಲಿತ, ಹಿಂದುಳಿದ ಸಮುದಾಯದವರು ಅದರಲ್ಲಿ ಪಾಲ್ಗೊಂಡಿಲ್ಲ ಎಂದಿದ್ದರು. ಇದಕ್ಕೆ ಮೊದಲು ಇನ್ನೊಂದು ಸಮಾವೇಶದಲ್ಲಿ ದೇಶದ ಯಾವುದೇ ಪ್ರಮುಖ ಹುದ್ದೆಗಳಲ್ಲಿ ದಲಿತರು ಇಲ್ಲ ಎಂದಿದ್ದರು.

ಆ ಮೂಲಕ ಅಲ್ಪ ಸಂಖ್ಯಾತರ ಜೊತೆಗೆ ಹಿಂದುಳಿದ ವರ್ಗದವರ ವೋಟ್ ಮೇಲೂ ರಾಹುಲ್ ಕಣ್ಣಿಟ್ಟಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಚುನಾವಣೆ ಬಂತೆಂದರೆ ಎಲ್ಲಾ ಪಕ್ಷಗಳೂ ಹಿಂದುಳಿದ ವರ್ಗದವರ ಓಲೈಕೆಗೆ ಮುಂದಾಗುವುದು ಸಹಜ. ಇದಕ್ಕೆ ಬಿಜೆಪಿಯೂ ಹೊರತಲ್ಲ. ಆದರೆ ರಾಹುಲ್ ತಮ್ಮ ಸಮಾವೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments