Webdunia - Bharat's app for daily news and videos

Install App

ಕಷ್ಟದ ಸಂದರ್ಭದಲ್ಲಿ ಕೈ ಹಿಡಿದಿದ್ದ ವಯನಾಡನ್ನೇ ಬಿಡಲಿದ್ದಾರೆ ರಾಹುಲ್ ಗಾಂಧಿ

Krishnaveni K
ಗುರುವಾರ, 13 ಜೂನ್ 2024 (13:22 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್ ಬರೇಲಿಯಲ್ಲಿ ಸ್ಪರ್ಧಿಸಿ ಗೆದ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಈಗ ಯಾವ ಕ್ಷೇತ್ರವನ್ನು ಆಯ್ಕೆ ಮಾಡುವುದು ಎಂಬ ಸಂದಿಗ್ಧತೆ ಎದುರಾಗಿದೆ.

ರಾಯ್ ಬರೇಲಿ ರಾಹುಲ್ ಗಾಂಧಿ ಮಾತ್ರವಲ್ಲ, ನೆಹರೂ ಕುಟುಂಬಕ್ಕೇ ತವರಿದ್ದಂತೆ. ಇಲ್ಲಿ ತಲೆತಲಾಂತರದಿಂದ ನೆಹರೂ ಕುಟುಂಬ ಸ್ಪರ್ಧೆ ನಡೆಸುತ್ತಲೇ ಇದೆ. ಈ ಬಾರಿ ರಾಹುಲ್ ಗಾಂಧಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡಿದ್ದರು. ಇದರ ಬೆನ್ನಲ್ಲೇ ಈಗ ಒಂದು ಕ್ಷೇತ್ರವನ್ನು ಬಿಡುವ ಅನಿವಾರ್ಯತೆ ರಾಹುಲ್ ಗೆ ಎದುರಾಗಿದೆ.

ಇದೀಗ ಕಾಂಗ್ರೆಸ್ ಮೂಲಗಳ ಪ್ರಕಾರ ರಾಹುಲ್ ವಯನಾಡು ಕ್ಷೇತ್ರವನ್ನು ಬಿಡಬಹುದು ಎನ್ನಲಾಗಿದೆ. ರಾಯ್ ಬರೇಲಿಯಾದರೆ ಕ್ಷೇತ್ರಕ್ಕೆ ಹೋಗಿ ಬರುವುದು ಸುಲಭ ಮತ್ತು ಸನಿಹ ಕೂಡಾ. ಆದರೆ ವಯನಾಡಿಗೆ ಆಗಾಗ ಬರುವುದಕ್ಕೆ ಆಗುವುದಿಲ್ಲ. ಹೀಗಾಗಿ ವಯನಾಡನ್ನು ಬಿಟ್ಟು ರಾಯ್ ಬರೇಲಿಯನ್ನು ಆರಿಸುವ ಸಾಧ್ಯತೆ ಹೆಚ್ಚಿದೆ.

ಆದರೆ 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೈ ಹಿಡಿದಿದ್ದು ಇದೇ ವಯನಾಡು ಕ್ಷೇತ್ರ. ಅ ಚುನಾವಣೆಯಲ್ಲಿ ರಾಹುಲ್ ಅಮೇಠಿ ಮತ್ತು ವಯನಾಡಿನಲ್ಲಿ ಸ್ಪರ್ಧಿಸಿದ್ದರು. ದುರದೃಷ್ಟವಶಾತ್ ಅಮೇಠಿಯಲ್ಲಿ ಸೋತಿದ್ದರು. ಆಗ ರಾಹುಲ್ ರನ್ನು ಗೆಲ್ಲಿಸಿದ್ದು ವಯನಾಡಿನ ಜನ. ಹೀಗಾಗಿ ಈಗ ಅಂದು ಅಮೇಠಿಯಲ್ಲಿ ಸೋತು ಸಂಕಷ್ಟಕ್ಕೀಡಾಗಿದ್ದ ರಾಹುಲ್ ಗಾಂಧಿ ಕೈ ಹಿಡಿದಿದ್ದ ವಯನಾಡನ್ನೇ ಈಗ ಕೈ ಬಿಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments