Webdunia - Bharat's app for daily news and videos

Install App

ರಾಹುಲ್ ಗಾಂಧಿ ರಾಯ್ ಬರೇಲಿಗೆ: ವಯನಾಡಿನಿಂದ ಪ್ರಿಯಾಂಕ ವಾದ್ರಾ ಸ್ಪರ್ಧೆ

Krishnaveni K
ಸೋಮವಾರ, 17 ಜೂನ್ 2024 (20:35 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿ ಗೆದ್ದಿದ್ದ ವಯನಾಡು ಲೋಕಸಭೆ ಕ್ಷೇತ್ರವನ್ನು ಈಗ ತಮ್ಮ ಸಹೋದರಿ ಪ್ರಿಯಾಂಕ ವಾದ್ರಾಗೆ ಬಿಟ್ಟುಕೊಡಲು ಮುಂದಾಗಿದ್ದಾರೆ.

ರಾಹುಲ್ ಗಾಂಧಿ ಈ ಬಾರಿ ವಯನಾಡು ಮತ್ತು ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಜಯಭೇರಿ ಭಾರಿಸಿದ್ದರು. ಇದೀಗ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡುತ್ತಿದ್ದಾರೆ. ಈ ಪೈಕಿ ಈಗ ರಾಯ್ ಬರೇಲಿಯನ್ನು ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿದ್ದಾರೆ.

ಅದರಂತೆ ಈ ಕ್ಷೇತ್ರದಿಂದ ಪ್ರಿಯಾಂಕ ಸ್ಪರ್ಧಿಸಲಿದ್ದಾರೆ ಎಂದು ಕಳೆದ ಎರಡು ದಿನಗಳಿಂದ ಭಾರೀ ಸುದ್ದಿ ಓಡಾಡುತ್ತಿತ್ತು. ಸ್ವತಃ ರಾಹುಲ್ ಗಾಂಧಿಯೇ ಸಹೋದರಿಗೆ ಇಲ್ಲಿಂದ ಸ್ಪರ್ಧಿಸಲು ಮನವಿ ಮಾಡಿದ್ದಾರೆ ಎನ್ನಲಾಗಿತ್ತು. ಅದೀಗ ನಿಜವಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ವಯನಾಡಿನ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದು, ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಇದುವರೆಗೆ ಪ್ರಿಯಾಂಕ ವಾದ್ರಾ ಪಕ್ಷದ ಸಂಘಟನೆಗಳಲ್ಲಿ, ಪ್ರಚಾರದಲ್ಲಿ ಕಾಣಿಸಿಕೊಂಡಿದ್ದರೇ ಹೊರತು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಚುನಾವಣಾ ಕಣಕ್ಕಿಳಿದಿದ್ದು ವಯನಾಡಿನಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments