ಗಮ್ ಬೂಟ್ ಹಾಕಿಕೊಂಡು ವಯನಾಡಿನ ಕೆಸರು ಮಣ್ಣಲ್ಲಿ ಅಕ್ಕ ಪ್ರಿಯಾಂಕಾ ಜೊತೆ ರಾಹುಲ್ ಗಾಂಧಿ ರೌಂಡ್ಸ್ ಹಾಕಿದ್ದು ಹೀಗೆ

Krishnaveni K
ಗುರುವಾರ, 1 ಆಗಸ್ಟ್ 2024 (14:59 IST)
ವಯನಾಡು: ಗುಡ್ಡ ಕುಸಿತದಿಂದಾಗಿ ನಿರ್ನಾಮವಾಗಿರುವ ವಯನಾಡಿಗೆ ಇಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಭೇಟಿ ನೀಡಿದ್ದಾರೆ.

ಗುಡ್ಡ ಕುಸಿತದಿಂದಾಗಿ ವಯನಾಡಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೆ ತಲುಪಿದೆ. ಇನ್ನೂ ನೂರಾರು ಜನ ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ನಡುವೆ ಇಂದು ಇಲ್ಲಿನ ಸಂಸದ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕ ವಾದ್ರಾ ಜೊತೆ ಭೇಟಿ ನೀಡಿ ಪರಿಸ್ಥಿತಿಗಳ ಬಗ್ಗೆ ತಿಳಿದುಕೊಂಡರು.

ಗುಡ್ಡ ಕುಸಿತ ಸಂಭವಿಸಿದ ಸ್ಥಳ ಈಗ ಕೆಸರು ಗೆದ್ದೆಯಂತಾಗಿದೆ. ಮಣ್ಣು ಮತ್ತು ನೀರು ಸೇರಿಕೊಂಡು ನಡೆಯಲೂ ಕಷ್ಟವಾಗುವಂತಹ ಪರಿಸ್ಥಿತಿ ಎದುರಾಗಿದೆ. ಪರಿಹಾರ ಕಾರ್ಯ ಮುಂದುವರಿಸಲು ರಕ್ಷಣಾ ಸಿಬ್ಬಂದಿಗಳು ತಾತ್ಕಾಲಿಕವಾಗಿ ಸೇತುವೆ, ಡೇರೆಗಳನ್ನು ನಿರ್ಮಿಸಿಕೊಂಡಿದ್ದಾರೆ.

ಗಮ್ ಬೂಟ್ ಮತ್ತು ಮಳೆಯಿಂದ ರಕ್ಷಣೆಗಾಗಿ ರೈನ್ ಕೋಟ್ ಧರಿಸಿಕೊಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ದುರಂತ ಸಂಭವಿಸಿದ ಸ್ಥಳದಲ್ಲಿ ಓಡಾಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಈ ವೇಳೆ ಅಲ್ಲಿದ್ದ ಸಂತ್ರಸ್ತರು ರಾಹುಲ್ ಗಾಂಧಿ ಬಳಿ ತಮ್ಮ ಕಷ್ಟ ತೋಡಿಕೊಂಡರು. ಸುರಿಯುವ ಮಳೆಯ ನಡುವೆಯೂ  ರಾಹುಲ್ ಸ್ಥಳ ಪರಿಶೀಲನೆ ನಡೆಸಿದರು. ಚೂರ್ಲಮಲದ ದುರಂತ ಸ್ಥಳ, ಮೇಪ್ಪಾಡಿಯ ಸಂತ್ರಸ್ತರ ಕೇಂದ್ರಗಳಿಗೂ ರಾಹುಲ್ ಭೇಟಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments