Webdunia - Bharat's app for daily news and videos

Install App

ಪಠಾನ್‌ಕೋಟ್ ಉಗ್ರರ ದಾಳಿ ನಡೆದಾಗ ರಾಹುಲ್ ಯುರೋಪ್ ಪ್ರವಾಸದಲ್ಲಿದ್ದರು; ಬಿಜೆಪಿ

Webdunia
ಶನಿವಾರ, 30 ಜನವರಿ 2016 (14:40 IST)
ದಲಿತ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ಆತ್ಮಹತ್ಯೆ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ರಾಹುಲ್ ಗಾಂಧಿ ಮತ್ತು ಜವಾಬ್ದಾರಿಗಳಿಗೆ ಒಂದಕ್ಕೊಂದು ಹೋಲಿಕೆಯಿಲ್ಲ. ಸತ್ತ ಹೆಣಗಳ ಮೇಲೆ ರಾಜಕೀಯ ಮಾಡುವುದನ್ನು ರಾಹುಲ್ ಗಾಂಧಿ ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ರಾಹುಲ್ ಕೆಲ ಆಯ್ದ ವಿಷಯಗಳ ಬಗ್ಗೆ ಮಾತ್ರ ಗಮನಹರಿಸುತ್ತಾರೆ. ಮಾಲ್ಡಾ ಗಲಭೆ ಮತ್ತು ಬಿಹಾರ್‌ನಲ್ಲಿ ಇಂಜಿನಿಯರ್‌ಗಳ ಹತ್ಯೆ ನಡೆದಾಗ ಒಂದೇ ಒಂದು ಹೇಳಿಕೆ ನೀಡಲಿಲ್ಲ. ಪಠಾನ್‌ಕೋಟ್ ದಾಳಿ ನಡೆದಾಗ ರಾಹುಲ್ ಯುರೋಪ್ ಪ್ರವಾಸದಲ್ಲಿದ್ದರು. 10 ದಿನಗಳ ನಂತರ ದೇಶಕ್ಕೆ ಮರಳಿ ಬಂದ ಸರಕಾರದ ವಿರುದ್ಧ ಆರೋಪ ಹೊರಿಸಿದರು ಎಂದು ತಿಳಿಸಿದ್ದಾರೆ.
 
ಸತ್ತ ಹೆಣಗಳ ಮೇಲೆ ರಾಜಕೀಯ ಮಾಡುವುದು ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವುದು, ಸಮಾಜದಲ್ಲಿ ಅಶಾಂತಿ ಹರಡುವುದು ಕಾಂಗ್ರೆಸ್ ಪಕ್ಷದ ಮಾರ್ಗಸೂತ್ರಗಳಾಗಿವೆ ಎಂದು ಲೇವಡಿ ಮಾಡಿದರು.
 
ಏತನ್ಮಧ್ಯೆ, ರಾಹುಲ್ ಗಾಂಧಿ ಹೈದ್ರಾಬಾದ್‌ಗೆ ಭೇಟಿ ನೀಡಿರುವುದರಲ್ಲಿ ರಾಜಕೀಯವಿಲ್ಲ ಎಂದು ಬಿಜೆಪಿ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ.ವಿದ್ಯಾರ್ಥಿಗಳು ದೇಶದ ಮುಂದಿನ ನಾಗರಿಕರಾಗಿದ್ದರಿಂದ ರಾಹುಲ್ ಹೈದ್ರಾಬಾದ್‌‌ಗೆ ಭೇಟಿ ನೀಡಿದ್ದಾರೆ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments