Webdunia - Bharat's app for daily news and videos

Install App

ಕಾಂಗ್ರೆಸ್ ಮುಕ್ತ ಭಾರತ ಪರಿಕಲ್ಪನೆ ರಾಹುಲ್ ಗಾಂಧಿಯಿಂದ ವಾಸ್ತವ: ಬಿಜೆಪಿ

Webdunia
ಶನಿವಾರ, 18 ಜೂನ್ 2016 (17:08 IST)
ರಾಹುಲ್ ಗಾಂಧಿ ಕಾಂಗ್ರೆಸ್ ಮುಕ್ತ ಭಾರತ ಪರಿಕಲ್ಪನೆಯನ್ನು ವಾಸ್ತವವಾಗಿಸಲಿದ್ದಾರೆ ಎಂದು ಬಿಜೆಪಿ ಪಂಜಾಬ್ ಮಾಜಿ ಅಧ್ಯಕ್ಷ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕಮಲ್ ಶರ್ಮಾ ವ್ಯಂಗ್ಯವಾಡಿದ್ದಾರೆ.
 
ಕಮಲ್‌ನಾಥ್ ಅವರನ್ನು ಪಂಜಾಬ್ ಉಸ್ತುವಾರಿಯಿಂದ ಕೆಳಗಿಳಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಶರ್ಮಾ ಸಮರ್ಥ ನಾಯಕತ್ವದ ಕೊರತೆಯಿಂದ ಅತಿ ಹಳೆಯ ರಾಜಕೀಯ ಪಕ್ಷ ಈಗ ಯು-ಟರ್ನ್ ಪಕ್ಷವಾಗಿಬಿಟ್ಟಿದೆ ಮತ್ತು ರಾಹುಲ್ ಗಾಂಧಿ ಸದ್ಯದಲ್ಲಿಯೇ ಕಾಂಗ್ರೆಸ್ ಮುಕ್ತ ಭಾರತ ಪರಿಕಲ್ಪನೆಯನ್ನು ಸತ್ಯವಾಗಿಸಲಿದ್ದಾರೆ ಎಂದು ಹೇಳಿದ್ದಾರೆ. 
 
ಪಂಜಾಬ್ ಪ್ರದೇಶ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ರಾಹುಲ್ ಈ ಮೊದಲು ಹೇಳಿದ್ದರು. ಆದರೆ ಎರಡನೆಯ ಬಾರಿಗೆ ಪಂಜಾಬ್‌ಗೆ ಭೇಟಿ ನೀಡಿದಾಗ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಸಂಪೂರ್ಣವಾಗಿ ಮೌನ ತಾಳಿದ್ದಾರೆ. ಇತರ ಪಕ್ಷಗಳನ್ನು ಬಿಡಿ, ಸ್ವತಃ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರೇ ಅವರ ಯು-ಟರ್ನ್ ವರ್ತನೆಯಿಂದ ಆಶ್ಚರ್ಯ ಚಕಿತರಾಗಿದ್ದಾರೆ ಎಂದಿದ್ದಾರೆ ಶರ್ಮಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಮುಂದಿನ ಸುದ್ದಿ
Show comments