Webdunia - Bharat's app for daily news and videos

Install App

ರಾಹುಲ್ ಗಾಂಧಿ ಸರಳತೆ ಮೋದಿ ಸೋಲಿಗೆ ಕಾರಣವಾಗಲಿದೆ: ರಾಜ್ ಬಬ್ಬರ್

Webdunia
ಶುಕ್ರವಾರ, 17 ಮಾರ್ಚ್ 2017 (14:33 IST)
ಉತ್ತರಪ್ರದೇಶ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯನ್ನು ಅರಗಿಸಿಕೊಳ್ಳಲಾಗದೆ ಹೀನಾಯ ಸೋಲನುಭವಿಸಿದ ಕಾಂಗ್ರೆಸ್, ರಾಹುಲ್ ಗಾಂಧಿಯವರ ಸರಳತೆ ಪ್ರಧಾನಿ ಮೋದಿಯನ್ನು ಸೋಲಿಸುತ್ತದೆ ಎಂದು ಹೇಳಿದೆ.
 
ಉತ್ತರಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜ್ ಬಬ್ಬರ್ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ವೇಳೆ ಪ್ರಧಾನಿ ಮೋದಿಯನ್ನು ಸೋಲಿಸುವುದೇ ಆದಲ್ಲಿ ಅದು ರಾಹುಲ್ ಗಾಂಧಿಯವರ ಸರಳತೆ ಮಾತ್ರ ಎಂದಿದ್ದಾರೆ.  
 
ಇತ್ತೀಚೆಗೆ ನಡೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಸಮಾಜವಾದಿ ಪಕ್ಷದ ಮೈತ್ರಿಕೂಟ 56 ಸ್ಥಾನಗಳಿಸಿ ಹೀನಾಯ ಸೋಲನುಭವಿಸಿದೆ. ಬಿಜೆಪಿ ಮೈತ್ರಿಕೂಟದ ಪಕ್ಷಗಳು 403 ರಲ್ಲಿ 325 ಸೀಟುಗಳಲ್ಲಿ ಜಯಭೇರಿ ಬಾರಿಸಿವೆ. ಮಾಯಾವತಿ ಪಕ್ಷ ಕೇವಲ 19 ಸ್ಥಾನಗಳಲ್ಲಿ ಜಯಗಳಿಸಿತ್ತು.
 
ಉ.ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತ ರಾಜ್‌ಬಬ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
 
ಉತ್ತರಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳ ಹೀನಾಯ ಸೋಲಿನ ನಂತರ ಮಾತನಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕೆಲ ಬದಲಾವಣೆಗಳನ್ನು ತರಬೇಕಾಗಿದೆ ಎಂದು ಹೇಳಿದ್ದರೆ, ಕೆಲ ನಾಯಕರು ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments